
ಕೋಲಾರದಲ್ಲಿ ಸಿದ್ದು ಸೋಲಿಸಲು ದಳಪತಿ ತಂತ್ರ: ಒಕ್ಕಲಿಗ, ಮುಸ್ಲಿಂ ಮತ ಸೆಳೆಯುವ ಜೆಡಿಎಸ್ ಪ್ಲಾನ್
ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಘೋಷಣೆ ಮಾಡಿದ ನಂತರ, ಕೋಲಾರಕ್ಕೆ ಇದೀಗ ಏಕಾಏಕಿ ಸ್ಟಾರ್ ವ್ಯಾಲ್ಯೂ ಬಂದಿದೆ. ಸಿದ್ದು ವಿರುದ್ಧ ಜೆಡಿಎಸ್ ಸಮರ ಸಾರಿದೆ.
ಕೋಲಾರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು ಜೆಡಿಎಸ್ನಿಂದ ರಣತಂತ್ರ ರೂಪಿಸಲಾಗುತ್ತಿದ್ದು, ಒಕ್ಕಲಿಗ ಹಾಗೂ ಮುಸ್ಲಿಂ ಮತಗಳನ್ನು ಒಗ್ಗೂಡಿಸಲು ಜೆಡಿಎಸ್ ಪ್ಲಾನ್ ನಡೆಸಿದೆ. ಮುಸ್ಲಿಂರು ಮತ್ತು ಒಕ್ಕಲಿಗರ ಓಲೈಕೆಗೆ ಜೆಡಿಸ್ನಿಂದ ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ. ಕೋಲಾರದಲ್ಲಿ ಒಕ್ಕಲಿಗ ಮತ್ತು ಮುಸ್ಲಿಂ ಮತಗಳು ನಿರ್ಣಾಯಕವಾಗಿದ್ದು, ಸಿ.ಎಂ ಇಬ್ರಾಹಿಂ ನೇತೃತ್ವದಲ್ಲಿ ಮುಸ್ಲಿಂ ಮತಗಳನ್ನು ಸೆಳೆಯಲು ತಂತ್ರ ರೂಪಿಸಿದ್ದಾರೆ. ಒಕ್ಕಲಿಗ ಮತಗಳನ್ನು ಸೆಳೆಯಲು ಪ್ರಜ್ವಲ್ ರೇವಣ್ಣಗೆ ಜವಾಬ್ದಾರಿ ವಹಿಸಲಾಗಿದೆ.
Add Asianetnews Kannada as a Preferred Source
