
ಬಿಜೆಪಿಯ 25ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಭುಗಿಲೆದ್ದ ಬಂಡಾಯ, ಬಲಿಷ್ಠ ನಾಯಕರ ರಾಜೀನಾಮೆ ಪರ್ವ!
ಬಿಜೆಪಿಯ 2ನೇ ಪಟ್ಟಿ ಬಿಡುಗಡೆಯಾಗಿದ್ದಂತೆಯೇ ಬಿಜೆಪಿ ರಾಜ್ಯ ನಾಯಕರಿಗೆ ಬಂಡಾಯದ ಬಿಸಿ ಮುಟ್ಟಿದೆ. ಸುಮಾರು 25 ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಪಕ್ಷದ ವಿರುದ್ಧ ಬಂಡಾಯವೆದ್ದಿದ್ದಾರೆ.
ಬಿಜೆಪಿಯ 2ನೇ ಪಟ್ಟಿ ಬಿಡುಗಡೆಯಾಗಿದ್ದಂತೆಯೇ ಬಿಜೆಪಿ ರಾಜ್ಯ ನಾಯಕರಿಗೆ ಬಂಡಾಯದ ಬಿಸಿ ಮುಟ್ಟಿದೆ. ಸುಮಾರು 25 ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಪಕ್ಷದ ವಿರುದ್ಧ ಬಂಡಾಯವೆದ್ದಿದ್ದಾರೆ. ವಲಸಿಗರಿಗೆ ಟಿಕೆಟ್ ನೀಡಿದ ಕಡೆ ಕಾರ್ಯಕರ್ತರು ಬಂಡಾಯವೆದ್ದಿದ್ದಾರೆ. ಈ ಬಂಡಾಯ ಇತರ ಪಕ್ಷಗಳಿಗೆ ಲಾಭವಾಗುತ್ತಾ ಎನ್ನುವ ಪ್ರಶ್ನೆ ಮೂಡಿದೆ. ಮೂಡಿಗೆರೆ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಎಂಪಿ ಕುಮಾರಸ್ವಾಮಿ, ಅಥಣಿ ಕ್ಷೇತ್ರದ ಲಕ್ಷ್ಮಣ ಸವದಿ, ರಾಣಿಬೆನ್ನೂರು ಕ್ಷೇತ್ರದ ಆರ್ ಶಂಕರ್ ಸೇರಿ ಹಲವು ಕ್ಷೇತ್ರದ ನಾಯಕರು ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ