ಮಗನಿಗಾಗಿ ರಾಮನಗರ ಕ್ಷೇತ್ರ ತ್ಯಾಗ ಮಾಡಿದ ತಾಯಿ ಅನಿತಾ ಕುಮಾರಸ್ವಾಮಿ!

ರಾಮನಗರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ, ರಾಮನಗರ ಕ್ಷೇತ್ರಕ್ಕೆ ಹೆಸರು ಘೋಷಿಸುತ್ತಿದ್ದಂತೆ ಭಾವುಕರಾದ ನಿಖಿಲ್, ಡಿಕೆಶಿ ಕುಕ್ಕರ್ ಸ್ಫೋಟ ಹೇಳಿಕೆಗೆ ಸಾಥ್ ನೀಡಿದ ಸಿದ್ದು, ಪ್ರಿಯಾಂಕ್, ಕುಕ್ಕರ್ ಸ್ಫೋಟದ ಉಗ್ರ ಮಂಗಳೂರಿಂದ ಬೆಂಗಳೂರಿಗೆ ಶಿಫ್ಟ್ ಸೇರಿದಂತೆ ಇಂದಿನ ಇಡೀ ದಿನದ ಕಂಪ್ಲೀಟ್ ಸ್ಟೋರಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

ಮಗನಿಗಾಗಿ ಅನಿತಾಕುಮಾರಸ್ವಾಮಿ ತಮ್ಮ ಕ್ಷೇತ್ರವನ್ನೇ ಬಿಟ್ಟುಕೊಟ್ಟಿದ್ದಾರೆ. ರಾಮನಗರದಲ್ಲಿ ಸ್ವತಃ ಅನಿತಾ ಕುಮಾರಸ್ವಾಮಿ ಈ ಘೋಷಣೆ ಮಾಡಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ರಾಮನಗರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂದಿದ್ದಾರೆ. ರಾಮನಗರ ಕ್ಷೇತ್ರಕ್ಕೆ ಹೆಸರು ಘೋಷಿಸುತ್ತಿದ್ದಂತೆ ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ರಾಮನಗರ ಜನತೆ ದೇವೇಗೌಡರ ಕುಟುಂಬಕ್ಕೆ ವಿಶೇಷ ಆಶೀರ್ವಾದ ನೀಡಿದ್ದಾರೆ. ರಾಮನಗರ ಜನತೆಯ ಆಶೀರ್ವಾದ ನನ್ನ ಮೇಲಿರಲಿ ಎಂದು ನಿಖಿಲ್ ಹೇಳಿದ್ದಾರೆ. ಇತ್ತ ಮಂಗಳೂರು ಸ್ಪೋಟದ ಉಗ್ರ ಶಾರೀಖ್‌ನನ್ನು ಮಂಗಳೂರಿನಿಂದ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಆಸ್ಪತ್ರೆ ಸುತ್ತ ಮುತ್ತ ಭಾರಿ ಭದ್ರತೆ ಒದಗಿಸಲಾಗಿದೆ. 

Related Video