Karnataka Assembly Elections 2023: ಕಾಂಗ್ರೆಸ್ 70 ಸ್ಥಾನ ಗೆದ್ದರೆ ಹೆಚ್ಚು ಎಂದ ಬಿಎಸ್ ಯಡಿಯೂರಪ್ಪ!
ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಯಾದ ಬೆನ್ನಲ್ಲಿಯೆ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಒಳ ಮೀಸಲಾತಿ ಪರವಾಗಿ ಅವರು ಬ್ಯಾಟಿಂಗ್ ಮಾಡಿದ್ದಾರೆ.
ಬೆಂಗಳೂರು (ಮಾ.30): ಚುನಾವಣೆ ಘೋಷಣೆ ಆದ ಬೆನ್ನಲ್ಲಿಯೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಜೋರಾಗಿದೆ. ಈಗಾಗಲೇ ಕಾಂಗ್ರೆಸ್ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದ್ದು, ಶೀಘ್ರದಲ್ಲಿಯೇ ಬಿಜೆಪಿಯ ಪಟ್ಟಿ ಕೂಡ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಲೋಕಸಭೆ ಚುನಾವಣೆ ವೇಳೆ 25 ಸ್ಥಾನ ಗೆಲ್ತೇವೆ ಅಂದಿದ್ದೆ ನನ್ನ ಮಾತು ಸುಳ್ಳಾಗಲಿಲ್ಲ. ಚುನಾವಣೆ ಮುಗಿಯುವವರೆಗೂ ಪಕ್ಷದ ಹಿರಿಯ ನಾಯಕರೆಲ್ಲರೂ ರಾಜ್ಯದ ಮೂಲೆ ಮೂಲೆಗೂ ಪ್ರವಾಸ ಮಾಡಲಿದ್ದಾರೆ. ಚುನಾವಣೆ ಮುಗಿಯುವವರೆಗೂ ಸಂಸದರು ಆಯಾ ಕ್ಷೇತ್ರದಲ್ಲೇ ಇರಬೇಕು ಎಂದು ಬಿಎಸ್ವೈ ಸೂಚನೆ ನೀಡಿದ್ದಾರೆ.
ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಪೋಸ್ಟರ್ ರಿಲೀಸ್
ಕಾಂಗ್ರೆಸ್ಗೆ ನಿಮ್ಮ ನಾಯಕ ಯಾರು ಅನ್ನೋದಷ್ಟೇ ನಮ್ಮ ಪ್ರಶ್ನೆ. ಅವರು ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಆ ಪಕ್ಷ 70 ಸ್ಥಾನ ಗೆದ್ದರೆ, ಹೆಚ್ಚು ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.