Asianet Suvarna News Asianet Suvarna News

ಇಂದಿನಿಂದ ಪಂಚರತ್ನ ರಥಯಾತ್ರೆ ಮತ್ತೆ ಪ್ರಾರಂಭ: ಕೋಲಾರದ ಜೆಡಿಎಸ್‌ ರಣಕಹಳೆ

ವಿಧಾನಸಭಾ ಚುನಾವಣೆ ಎದುರಿಸಲು ಜೆಡಿಎಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಇಂದಿನಿಂದ ಮತ್ತೆ ಕುಮಾರಸ್ವಾಮಿ ಕನಸಿನ ಪಂಚರತ್ನ ಯಾತ್ರೆ ಆರಂಭವಾಗಿದೆ.
 

ಕರ್ನಾಟಕ ಕುರುಕ್ಷೇತ್ರಕ್ಕೆ ಜೆಡಿಎಸ್‌ ರಣಕಹಳೆ ಊದಿದ್ದು, ಹೆಚ್.‌ಡಿ.ಕೆ ಕನಸಿನ ಪಂಚರತ್ನ ಯಾತ್ರೆ ಮತ್ತೆ ಆರಂಭವಾಗಿದೆ. ಕೋಲಾರದ ಮುಳಬಾಗಿಲು ವಿಧಾನಸಭೆ ಕ್ಷೇತ್ರದಲ್ಲಿ ಇಂದು ಪಂಚರತ್ನ ರಥಯಾತ್ರೆ ನಡೆದಿದ್ದು, ರಾತ್ರಿ ತಾಲೂಕಿನ ಊರುಕುಂಟೆ ಮಿಟ್ಟೂರು ಗ್ರಾಮದಲ್ಲಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಪಂಚರತ್ನ ಯಾತ್ರೆ ವೇಳೆ ಸ್ಥಳೀಯ ನಾಯಕರ ಜೊತೆ ಸಭೆ ನಡೆಸಿ, ಎಲ್ಲಾ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಲಿದ್ದಾರೆ. ಯಾತ್ರೆಯ ಮೂಲಕ 123 ಕ್ಷೇತ್ರಗಳನ್ನು ಗೆಲ್ಲಲು ಹೆಚ್.‌ಡಿ.ಕೆ ಪಣ ತೊಟ್ಟಿದ್ದು, ಚುನಾವಣೆಯವರೆಗೂ ರಾಜ್ಯಾದ್ಯಂತ ಸಂಚಾರ ಮಾಡಲಿದ್ದಾರೆ.

ಕಾಂಗ್ರೆಸ್‌ ಸೋಲಿನ ಭಯದಿಂದ ಆರೋಪ ಮಾಡುತ್ತಿದೆ: ಯಡಿಯೂರಪ್ಪ ಕಿಡಿ
 

Video Top Stories