
ಕಾಂಗ್ರೆಸ್ ಟಿಕೆಟ್ ಅರ್ಜಿಗಳಲ್ಲಿ ಫೈನಲ್ ಆಗುವುದು ಯಾವುದು?: ದಿನೇಶ್ ಗುಂಡೂರಾವ್ ಹೇಳಿದ್ದೇನು?
ಕೆಪಿಸಿಸಿಯ ಮಾಜಿ ಅಧ್ಯಕ್ಷರು ಹಾಗೂ ಶಾಸಕ ದಿನೇಶ್ ಗುಂಡೂರಾವ್ ಅವರು ಚುನಾವಣೆಗೆ ಸಿದ್ಧತೆ ಕುರಿತು ಹಾಗೂ ವಿವಿಧ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಈ ವಿಷಯದಲ್ಲಿ ಮತ್ತೆ ಮತ್ತೆ ಸುದ್ದಿಯಲ್ಲಿರುವುದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನ. ಎಷ್ಟು ಅರ್ಜಿಗಳು ಬಂತು, ಅದ್ರಲ್ಲಿ ಫೈನಲ್ ಆಗುವುದು ಯಾವುದು?. ಈ ವಿಷಯದ ಬಗ್ಗೆ ಮಾತನಾಡಲು ಹಾಗೂ ವಿವಿಧ ಪ್ರಶ್ನೆಗಳಿಗೆ ಕೆಪಿಸಿಸಿಯ ಮಾಜಿ ಅಧ್ಯಕ್ಷರು ಹಾಗೂ ಶಾಸಕ ದಿನೇಶ್ ಗುಂಡೂರಾವ್ ಉತ್ತರಿಸಿದ್ದಾರೆ. ಚುನಾವಣೆಗೆ ಏನು ಸಿದ್ಧತೆ ಮಾಡಿಕೊಳ್ಳಬೇಕು ಅದನ್ನು ಮಾಡಿಕೊಳ್ಳುತ್ತಿದ್ದೇವೆ. ಪಕ್ಷದಿಂದ ಹಲವು ಕಾರ್ಯಕ್ರಮಗಳನ್ನು ಮಾಡಿಕೊಳ್ಳಲಾಗುತ್ತದೆ. ಚುನಾವಣೆಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ ಎಂದು ಹೇಳುವುದರ ಮೂಲಕ ಅವರು ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘನೆಗಳ ಪ್ರಶ್ನೆಗಳಿಗೆ ಉತ್ತರವನ್ನು ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆಯಲು ಈ ವಿಡಿಯೋವನ್ನು ನೋಡಿ.
Add Asianetnews Kannada as a Preferred Source
