ಗೋಕಾಕ್, ಹೊಸಕೋಟೆ ಆಯ್ತು, ಮತ್ತೊಂದು ಕಡೆ ಬಿಜೆಪಿ ಅಭ್ಯರ್ಥಿ ವಿರುದ್ಧ ಸಹೋದರ ಸಮರ!
ಡಿಸೆಂಬರ್ ಬರುತ್ತಿದ್ದಂತೆ ರಾಜ್ಯದಲ್ಲಿ ಚಳಿ ಹೆಚ್ಚಾಗುತ್ತಿದೆ, ಆದರೆ ಉಪಚುನಾವಣೆಯು ಬಿಸಿಯನ್ನು ಹೆಚ್ಚಿಸಿದೆ. ಗೋಕಾಕ್ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ವಿರುದ್ಧ ಸ್ವಂತ ಸಹೋದರ ಲಖನ್ ಜಾರಕಿಹೊಳಿ ತಡೆತಟ್ಟಿದ್ದಾರೆ. ಇನ್ನೊಂದು ಕಡೆ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ. ನಾಗರಾಜ್ ವಿರುದ್ಧ ಸಹೋದರ ವಾಗ್ದಾಳಿ ನಡೆಸುತ್ತಿದ್ದಾರೆ. ಅದಕ್ಕೆ ಸೇರ್ಪಡೆ ಎಂಬಂತೆ, ಮತ್ತೊಂದು ಕ್ಷೇತ್ರದಲ್ಲೂ ಬಿಜೆಪಿಯ ಅಭ್ಯರ್ಥಿ ವಿರುದ್ಧ ಅವರ ಸಹೋದರನೇ ಪ್ರಚಾರಕ್ಕಿಳಿದಿದ್ದಾರೆ.
ಬೆಂಗಳೂರು (ನ.22): ಡಿಸೆಂಬರ್ ಬರುತ್ತಿದ್ದಂತೆ ರಾಜ್ಯದಲ್ಲಿ ಚಳಿ ಹೆಚ್ಚಾಗುತ್ತಿದೆ, ಆದರೆ ಉಪಚುನಾವಣೆಯು ಬಿಸಿಯನ್ನು ಹೆಚ್ಚಿಸಿದೆ. ಗೋಕಾಕ್ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ವಿರುದ್ಧ ಸ್ವಂತ ಸಹೋದರ ಲಖನ್ ಜಾರಕಿಹೊಳಿ ತಡೆತಟ್ಟಿದ್ದಾರೆ. ಇನ್ನೊಂದು ಕಡೆ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ. ನಾಗರಾಜ್ ವಿರುದ್ಧ ಸಹೋದರ ವಾಗ್ದಾಳಿ ನಡೆಸುತ್ತಿದ್ದಾರೆ. ಅದಕ್ಕೆ ಸೇರ್ಪಡೆ ಎಂಬಂತೆ, ಮತ್ತೊಂದು ಕ್ಷೇತ್ರದಲ್ಲೂ ಬಿಜೆಪಿಯ ಅಭ್ಯರ್ಥಿ ವಿರುದ್ಧ ಅವರ ಸಹೋದರನೇ ಪ್ರಚಾರಕ್ಕಿಳಿದಿದ್ದಾರೆ.
ಶಾಸಕರ ರಾಜೀನಾಮೆಯಿಂದ ತೆರವಾಗಿರುವ 15 ಕ್ಷೇತ್ರಗಳಿಗೆ ಡಿ.05ರಂದು ಉಪಚುನಾವಣೆ ನಡೆಯಲಿದೆ. ಡಿ.09ಕ್ಕೆ ಮತ ಎಣಿಕೆ ನಡೆಯಲಿದ್ದು, ಕಣದಲ್ಲಿರುವ 165 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಪ್ರಕಟವಾಗಲಿದೆ.