Asianet Suvarna News Asianet Suvarna News

ಸಂಪುಟ ವಿಸ್ತರಣೆ ಸುಳಿವು ಕೊಟ್ಟ ಸಿಎಂ, ಯಾರಿಗೆ ಕೊಕ್, ಯಾರಿಗೆ ಮಣೆ?

ವಿಧಾನಪರಿಷತ್‌ ಚುನಾವಣೆ ಮತ್ತು ಉಪಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಸಚಿವ ಸಂಪುಟ ವಿಸ್ತರಣೆಗೆ ವಿಚಾರ ಮುನ್ನಲೆಗೆ ಬಂದಿದೆ. 

ಬೆಂಗಳೂರು (ಅ. 31): ವಿಧಾನಪರಿಷತ್‌ ಚುನಾವಣೆ ಮತ್ತು ಉಪಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಸಚಿವ ಸಂಪುಟ ವಿಸ್ತರಣೆಗೆ ವಿಚಾರ ಮುನ್ನಲೆಗೆ ಬಂದಿದೆ. ಉಪಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದೆಹಲಿಗೆ ಪ್ರಯಾಣ ಬೆಳೆಸಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ಕುರಿತು ನಿರ್ಣಯ ಕೈಗೊಳ್ಳಲಿದ್ದಾರೆ.

ಸಂದರ್ಶನ: RR ನಗರ, ಶಿರಾ ಬೈ ಎಲಕೆಕ್ಷನ್ ಅಭ್ಯರ್ಥಿ ಆಯ್ಕೆ ಬಗ್ಗೆ ಬಿಜೆಪಿ ಸಾರಥಿ ಬಿಚ್ಚು ಮಾತು!

ಉಪಚುನಾವಣೆ ಬಳಿಕ ಎಲ್ಲವೂ ಬದಲಾವಣೆಯಾಗುವುದು ನಿಶ್ಚಿತ. ಸಂಪುಟ ವಿಸ್ತರಣೆ ಸಂಬಂಧ ಚುನಾವಣೆ ಮುಗಿದ ಮೇಲೆ ದೆಹಲಿಗೆ ಹೋಗಿ ವರಿಷ್ಠರ ಜತೆ ಮಾತುಕತೆ ನಡೆಸಿ ಬರುತ್ತೇನೆ. ತರುವಾಯ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
 

Video Top Stories