ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ ಗರಿಗೆದರಿದ ಸಚಿವ ಸಂಪುಟ ಪುನಾರಚನೆ ಲೆಕ್ಕಾಚಾರ
ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಲೆಕ್ಕಾಚಾರ ಗರಿಗೆದರಿದೆ. ಇದೇ ತಿಂಗಳಲ್ಲೇ ಸಂಪುಟ ಪುನಾರಚನೆಯಾಗಲಿದೆ ಎಂದು ತಿಳಿದುಬಂದಿದೆ
ಬೆಂಗಳೂರು, (ಏ.15): ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಇಂದು(ಶುಕ್ರವಾರ) ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಪತ್ರ ನೀಡಲಿದ್ದಾರೆ.
2023ಕ್ಕೆ ಬಿಜೆಪಿ ತಯಾರಿ, ರಾಜ್ಯ, ರಾಷ್ಟ್ರೀಯ ನಾಯಕರ ಸಮಾಗಮ ಚುನಾವಣೆ ರಣಕಹಳೆ
ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಲೆಕ್ಕಾಚಾರ ಗರಿಗೆದರಿದೆ. ಇದೇ ತಿಂಗಳಲ್ಲೇ ಸಂಪುಟ ಪುನಾರಚನೆಯಾಗಲಿದೆ ಎಂದು ತಿಳಿದುಬಂದಿದೆ. ಇದೇ ತಿಂಗಳು 16 ಹಾಗೂ 17 ರಂದು ಹೊಸಪೇಟೆಯಲ್ಲಿ ನಡೆಯುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನವಾಗಲಿದೆ.