Asianet Suvarna News Asianet Suvarna News

OBC ವಿರಾಟ ಸಮಾವೇಶ: ಸಿದ್ದರಾಮಯ್ಯ ವಿರುದ್ಧ ಬೊಮ್ಮಾಯಿ ವಾಕ್‌ಪ್ರಹಾರ

ಕಾಗಿನೆಲೆ ಅಭಿವೃದ್ಧಿ ಮಾಡಿದ್ದು ಬಿ.ಎಸ್‌. ಯಡಿಯೂರಪ್ಪ. ಸಾಮಾಜಿಕ ನ್ಯಾಯದ ಬಗ್ಗೆ ಕೇವಲ ಮಾತನಾಡಬಾರದು ಕೆಲಸ ಮಾಡಬೇಕು. ನಿಮ್ಮ ಅವಧಿಯಲ್ಲಿ ಕುರಿಗಾಹಿಗಳಿಗೆ ಏನು ಅಭಿವೃದ್ಧಿ ಮಾಡಿದ್ದೀರಿ ಎಂದೂ ಸಿಎಂ ಬೊಮ್ಮಾಯಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ. 

ಕಲಬುರಗಿಯಲ್ಲಿ ಭಾನುವಾರ ನಡೆದ ಓಬಿಸಿ ವಿರಾಟ ಸಮಾವೇಶದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಕ್‌ ಪ್ರಹಾರ ನಡೆಸಿದ್ದಾರೆ. ಜನರ ಜೋಶ್‌ ನೋಡಿದರೆ 2023ರಲ್ಲಿ ಬಿಜೆಪಿ ಬಾವುಟ ಹಾರುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಓಬಿಸಿ ಸಮಾವೇಶದಲ್ಲಿ, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ, ಎಲ್ಲರನ್ನೂ ಎಲ್ಲ ಕಾಲದಲ್ಲೂ ಮೋಸ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವಧಿಯಲ್ಲಿ ಕುರುಬರಿಗೆ ಸಚಿವ ಸ್ಥಾನ ಕೂಡ ಸಿಗಲಿಲ್ಲ. ಕಾಗಿನೆಲೆ ಅಭಿವೃದ್ಧಿ ಮಾಡಿದ್ದು ಬಿ.ಎಸ್‌. ಯಡಿಯೂರಪ್ಪ. ಸಾಮಾಜಿಕ ನ್ಯಾಯದ ಬಗ್ಗೆ ಕೇವಲ ಮಾತನಾಡಬಾರದು ಕೆಲಸ ಮಾಡಬೇಕು. ನಿಮ್ಮ ಅವಧಿಯಲ್ಲಿ ಕುರಿಗಾಹಿಗಳಿಗೆ ಏನು ಅಭಿವೃದ್ಧಿ ಮಾಡಿದ್ದೀರಿ ಎಂದೂ ಸಿಎಂ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
 

Video Top Stories