
ಬಿಎಸ್ವೈಗೆ ಕಾಂಗ್ರೆಸ್ ನಾಯಕರ ಬಲ, ಎಚ್ಚರಿಕೆಯಿಂದ ಹೆಜ್ಜೆ ಇಡಲು ಬಿಜೆಪಿ ಚಿಂತನೆ!
ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಹೈಡ್ರಾಮಾ ನಡೆಯುತ್ತಿದೆ. ಜುಲೈ 26ಕ್ಕೆಡ ಫೈನಲ್ ಅಲ್ಲ, ಆಗಸ್ಟ್ 6ಕ್ಕೆ ಅಂತಿಮ ನಿರ್ಧಾರ ಪ್ರಕಟವಾಗೋದು ಪಕ್ಕಾ ಎನ್ನಲಾಗುತ್ತಿದೆ.
ಬೆಂಗಳೂರು(ಜು.20): ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಹೈಡ್ರಾಮಾ ನಡೆಯುತ್ತಿದೆ. ಜುಲೈ 26ಕ್ಕೆಡ ಫೈನಲ್ ಅಲ್ಲ, ಆಗಸ್ಟ್ 6ಕ್ಕೆ ಅಂತಿಮ ನಿರ್ಧಾರ ಪ್ರಕಟವಾಗೋದು ಪಕ್ಕಾ ಎನ್ನಲಾಗುತ್ತಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬದಲಾವಣೆ ಬಗ್ಗೆ ಕಳೆದ ಎರಡು ದಿನಗಳಿಂದ ತೀವ್ರ ವದಂತಿಗಳು ಕೇಳಿಬರುತ್ತಿದ್ದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತ್ರ ಮೌನಕ್ಕೆ ಶರಣಾಗಿದ್ದಾರೆ. ಈ ನಡುವೆ ಲಿಂಗಾಯತ ಸಮುದಾಯದ ಮುಖಂಡರು ಹಾಗೂ ಮಠಾಧೀಶರು ಬಹಿರಂಗವಾಗಿ ಯಡಿಯೂರಪ್ಪ ಅವರ ಬೆನ್ನಿಗೆ ನಿಲ್ಲುತ್ತಿದ್ದಾರೆ.
ಜು.26 ಕೇಸರಿ ಮನೆಯಲ್ಲಿ ಕಂಪನ : ಬಿಜೆಪಿ ನಾಯಕರಿಗೆ ಲಿಂಗಾಯತರ ಎಚ್ಚರಿಕೆ !
ಹೀಗಾಗಿ, ಈ ಬಿಕ್ಕಟ್ಟನ್ನು ಯಾವುದೇ ರೀತಿಯಲ್ಲಿ ಪಕ್ಷಕ್ಕೆ ಧಕ್ಕೆಯಾಗದಂತೆ ಮುಗಿಸಲು ಪಕ್ಷದ ವರಿಷ್ಠರು ಹಾಗೂ ಸಂಘ ಪರಿವಾರದ ಮುಖಂಡರು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.