Asianet Suvarna News Asianet Suvarna News

ಹೈಕಮಾಂಡ್ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಸಿದ್ದು ಪರ ಇಬ್ಬರು ನಾಯಕರ ಬ್ಯಾಟಿಂಗ್!

ಬಹಿರಂಗ ಹೇಳಿಕೆಗೆ ಬ್ರೇಕ್, ಬೌಂಡರಿ ದಾಟಿದರೆ ಶಿಸ್ತುಕ್ರಮದ ಎಚ್ಚರಿಕೆ, ಕಾಂಗ್ರೆಸ್ ಸರ್ಕಾರಕ್ಕೆ ದಿನಕ್ಕೊಂದು ಸವಾಲು, ಅಖಾಡಕ್ಕಿಳಿದ ಹೈಕಮಾಂಡ್, ಹೈಕಮಾಂಡ್ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಸಿದ್ದು ಪರ ಇಬ್ಬರು ನಾಯಕರ ಬ್ಯಾಟಿಂಗ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಸಿದ್ದರಾಮಯ್ಯ ಸರ್ಕಾರಕ್ಕೆ ದಿನಕ್ಕೊಂದು ಸವಾಲು ಎದುರಾಗುತ್ತಿದೆ. ಇದೀಗ ಮತ್ತೆ ಸಿಎಂ ಬದಲಾವಣೆ ಕೂಗು ಜೋರಾಗುತ್ತಿದೆ. ಗಂಭೀರತೆ ಅರಿತು ಹೈಕಮಾಂಡ್ ಇಬ್ಬರು ನಾಯಕರನ್ನು ಬೆಂಗಳೂರಿಗೆ ಕಳುಹಿಸಿದೆ.ಕರ್ನಾಟಕ ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡಿ ಸರ್ಕಾರಕ್ಕೆ ಮುಜುಗರ ತಂದಿಟ್ಟಿದ್ದಾರೆ. ಇದರ ಬೆನ್ನಲ್ಲೇ ರಣದೀಪ್ ಸುರ್ಜೇವಾಲ, ಕೆಸಿ ವೇಣುಗೋಪಾಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಯಾರೂ ಕೂಡ ಪಕ್ಷದ ಮಿತಿ ಮೀರಿ ಹೇಳಿಕೆ ನೀಡಬಾರದು ಎಂದು ಎಚ್ಚರಿಸಿದ್ದಾರೆ. ಹೈಕಮಾಂಡ್ ಖಡಕ್ ಎಚ್ಚರಿಕೆ ಬೆನ್ನಲ್ಲೇ ಇಬ್ಬರು ನಾಯಕರು ಸಿಎಂ ಸಿದ್ದರಾಮಯ್ಯ ಪರ ಹೇಳಿಕೆ ನೀಡಿದ್ದಾರೆ.

Video Top Stories