
ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲ: ಕಾಂಗ್ರೆಸ್ ಆಕ್ರೋಶ
ಕೋವಿಡ್ ಸೋಂಕು ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
ಬೆಂಗಳೂರು, (ಮೇ.12): ಕೋವಿಡ್ ಸೋಂಕು ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
Add Asianetnews Kannada as a Preferred Source

ಸೆಕೆಂಡ್ ಡೋಸ್ಗೂ ಇಲ್ಲ ಲಸಿಕೆ : ಎಲ್ಲಾ ಕಡೆ ನೋ ಸ್ಟಾಕ್ ಬೋರ್ಡ್
ಇಂದು (ಬುಧವಾರ) ವಿಕಾಸಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಿದ ಕೈ ನಾಯಕರು, ಕೋವಿಡ್ ಸೋಕಿತರ ಪ್ರಾಣ ರಕ್ಷಣೆಯಲ್ಲಿ ವಿಫಲವಾಗಿರುವ, ಬೆಡ್, ಆಕ್ಸಿಜನ್, ವೆಂಟಿಲೇರ್ ಒದಗಿಸುವಲ್ಲಿ ನಿರ್ಲಕ್ಷ ವಹಿಸಿರುವ, ಬಡವರಿಗಾಗಿ ಪ್ಯಾಕೇಜ್ ಘೋಷಿಸದ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.