ಕಾಂಗ್ರೆಸ್ ಸಿಕ್ತು ಬಹುದೊಡ್ಡ ಅಸ್ತ್ರ, ಬಿಜೆಪಿ ವಿರುದ್ಧ ಸಮರಕ್ಕೆ ಸಿದ್ಧ
ಕೆಎಸ್ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಆದ್ರೆ, ಕಾಂಗ್ರೆಸ್ ಇಷ್ಟಕ್ಕೆ ಸುಮ್ಮನಾಗದೆ 40% ಕಮಿಷನ್ ಅಸ್ತ್ರವನ್ನಾಗಿಸಿಕೊಂಡು ರಾಜ್ಯಾದ್ಯಾಂತ ಪ್ರತಿಭಟನೆ ಮಾಡಲು ಮುಂದಾಗಿದೆ.
ಬೆಂಗಳೂರು, (ಏ.15): ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ (Minister K.S.Eshwarappa) ಅವರೇ ಕಾರಣ ಎಂದು ಸ್ಪಷ್ಟವಾಗಿ ಡೆತ್ ನೋಟ್ (Death Note) ಬರೆದಿಟ್ಟು ಗುತ್ತಿಗೆದಾರ ಹಾಗೂ ಹಿಂದೂ ಸಂಘಟನೆಯ ಮುಖಂಡ ಸಂತೋಷ್ ಪಾಟೀಲ್ (Contractor Santosh Patil) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪ್ರಕರಣ ಈಗ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಈಶ್ವರಪ್ಪ ಮಾತಿಗೆ ನಿಂತ್ರೆ ಬ್ರೇಕ್ ಫೇಲ್: ವಿವಾದಗಳ ಸರದಾರ ಈ ಸಕಲವಿವಾದವಲ್ಲಭ..
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಆದ್ರೆ, ಕಾಂಗ್ರೆಸ್ ಇಷ್ಟಕ್ಕೆ ಸುಮ್ಮನಾಗದೆ 40% ಕಮಿಷನ್ ಅಸ್ತ್ರವನ್ನಾಗಿಸಿಕೊಂಡು ರಾಜ್ಯಾದ್ಯಾಂತ ಪ್ರತಿಭಟನೆ ಮಾಡಲು ಮುಂದಾಗಿದೆ.