ಜೋಶಿ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ: ಸಿ.ಟಿ ರವಿ ವಾಗ್ದಾಳಿ

ವಿಧಾನಸಭೆ ಚುನಾವಣೆಯ ನಂತರ ಬಿಜೆಪಿಯಲ್ಲಿ ಬ್ರಾಹ್ಮಣ ಸಿಎಂ ಮಾಡಲು ಆರ್ ಎಸ್ಎಸ್ ನಿರ್ಧರಿಸಿದೆ ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಕೇಸರಿ ಪಡೆ ಕಿಡಿ ಕಾರಿದೆ.
 

Share this Video
  • FB
  • Linkdin
  • Whatsapp

ಬಿಜೆಪಿ ಗೆದ್ದರೆ ಬ್ರಾಹ್ಮಣ ಸಿಎಂ ಹಾಗೂ 8 ಮಂದಿ ಡಿಸಿಎಂ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಹಾಕಿದ್ದು, ಕೇಸರಿ ಪಡೆ ಸಿಡಿದೆದ್ದಿದೆ‌. ಪ್ರಲ್ಹಾದ್‌ ಜೋಶಿಯನ್ನು ಸಿಎಂ ಮಾಡಲು RSS ನಿರ್ಧರಿಸಿದೆ, ಜೋಶಿ ಮರಾಠ ಬ್ರಾಹ್ಮಣ ಸಮುದಾಯದವರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸಿ‌ಟಿ ರವಿ ವಾಗ್ದಾಳಿ ನಡೆಸಿದ್ದು, ಜೋಶಿ ಅವರ ಜಾತಿಯ ಬಗ್ಗೆ ಹೆಚ್‌ಡಿಕೆಗೆ ಮಾಹಿತಿ ಕೊರತೆಯಿದೆ. ಪ್ರಲ್ಹಾದ್ ಜೋಶಿಯವರ 4-5 ತಲೆಮಾರು ಕರ್ನಾಟಕದಲ್ಲಿದೆ. ಯೋಗ್ಯತೆ ಇರುವುದಕ್ಕೆ ಜೋಶಿ ಹೆಸರು ಸಿಎಂ ಆಕಾಂಕ್ಷಿ ಪಟ್ಟಿಯಲ್ಲಿದೆ. ಕುಮಾರಸ್ವಾಮಿ ಮಾತಿನ ಮೂಲಕ ಬ್ರಾಹ್ಮಣ ದ್ವೇಷ ತೋರಿಸುತ್ತಿದ್ದಾರೆ‌. ಅವರು ನಮ್ಮ ಸಂಸದೀಯ ಮಂಡಳಿ ಸದಸ್ಯರಲ್ಲ ಎಂದು ಕಿಡಿ ಕಾರಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video