
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ನಿರಾಸೆ, ಹೈಕಮಾಂಡ್ ಹೊಸ ರೂಲ್ಸ್ !
ಸಂಕ್ರಾತಿಗೆ ರಾಜ್ಯ ಕಾಂಗ್ರೆಸ್ ಟಿಕೆಟ್ ಘೋಷಿಸುವುದಾಗಿ ಹೇಳಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಇದೀಗ ಪ್ಲಾನ್ ಬದಲಿಸಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಸಂಕ್ರಾತಿಗೆ ಟಿಕೆಟ್ ಘೋಷಣೆ ಮಾಡುವುದಾಗಿ ಹೇಳಿತ್ತು. ಆದರೆ ಹೈಕಮಾಂಡ್ ಇದೀಗ ಸ್ಪಷ್ಟನೆ ನೀಡಿದ್ದು, ಟಿಕೆಟ್ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಸಂಕ್ರಾತಿಗೆ 150 ಕ್ಷೇತ್ರಗಳ ಟಿಕೆಟ್ ಘೋಷಣೆ ಅಸಾಧ್ಯ ಎಂದಿದೆ. ಹಂತ ಹಂತವಾಗಿ ಟಿಕೆಟ್ ಘೋಷಣೆಗೆ ಕಾಂಗ್ರೆಸ್ ಹೈಕಮಾಂಡ್ ಹೇಳಿದೆ. ಕೊನೆಯ ಕ್ಷಣದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿದೆ.
Add Asianetnews Kannada as a Preferred Source
