Asianet Suvarna News Asianet Suvarna News

ಹುಬ್ಬಳ್ಳಿ ಸೆಂಟ್ರಲ್‌ನಲ್ಲಿ ಗುರು ಶಿಷ್ಯರ ನಡುವೆ ಫೈಟ್..ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ ಶೆಟ್ಟರ್ ಬಗ್ಗೆ ಜನತೆ ಏನಂದ್ರು..?

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ, ಹುಬ್ಬಳ್ಳಿ ಸೆಂಟ್ರಲ್‌  ಕ್ಷೇತ್ರದ ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
 

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ,ಹುಬ್ಬಳ್ಳಿ ಸೆಂಟ್ರಲ್‌  ಕ್ಷೇತ್ರದ  ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದೆ, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ.  ರಾಜಕಾರಣಿಗಳು ಬಿಝಿಯಾಗಿದ್ದಾರೆ. ಇನ್ನೊಂದು ಕಡೆ ಮತದಾರರು ಕೂಡಾ ಎಲ್ಲವನ್ನು ಕೂತು ಗಮನಿಸುತ್ತಿದ್ದು, ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಹೇಶ್ ಟೆಂಗಿನಕಾಯಿ ಗೆಲ್ಲುತ್ತಾರೆ ಯಾಕಂದರೆ ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟು ಪಕ್ಷಕ್ಕೆ ಹಾರುತ್ತಿದ್ದಾರೆ. ಬಿಜೆಪಿ ಅವರಿಗೆ ಎಲ್ಲನು ಕೊಟ್ಟಿದೆ ಆದರೆ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್‌ ಹೋಗುವುದು ಸರಿ ಇಲ್ಲ ಎಂದು ಹೇಳಿದ್ದಾರೆ .

Video Top Stories