Asianet Suvarna News Asianet Suvarna News

ಇಬ್ಬರು ದೊಡ್ಡ ನಾಯಕರು.. ಎರಡು ಎಡವಟ್ಟು,ಸಿದ್ದು..ಖರ್ಗೆ ಮಾತು ಕೈಗೆ ಕಂಟಕ..!

ಸಿದ್ದು ‘ಲಿಂಗಾಯತ ಸಿಎಂ ಭ್ರಷ್ಟಾಚಾರಿ’ ಹೇಳಿಕೆಯಿಂದ ಹೊಡೆತ, ಈಗ ‘ಮೋದಿ ವಿಷಸರ್ಪ’ ಹೇಳಿಕೆಯಿಂದ ಇನ್ನಷ್ಟು ಡ್ಯಾಮೇಜ್‌?, ಕಾಂಗ್ರೆಸ್ಸಿನ ನಾಯಕರ ಹೇಳಿಕೆಗೆ ಬಿಜೆಪಿ ಅಸ್ತ್ರ. 

First Published Apr 29, 2023, 11:32 AM IST | Last Updated Apr 29, 2023, 11:32 AM IST

ಸಿದ್ದು ‘ಲಿಂಗಾಯತ ಸಿಎಂ ಭ್ರಷ್ಟಾಚಾರಿ’ ಹೇಳಿಕೆಯಿಂದ ಹೊಡೆತ, ಈಗ ‘ಮೋದಿ ವಿಷಸರ್ಪ’ ಹೇಳಿಕೆಯಿಂದ ಇನ್ನಷ್ಟು ಡ್ಯಾಮೇಜ್‌?, ಕಾಂಗ್ರೆಸ್ಸಿನ ನಾಯಕರ ಹೇಳಿಕೆಗೆ ಬಿಜೆಪಿ ಅಸ್ತ್ರ. ಲಿಂಗಾಯತ ಸಿಎಂಗಳು ಭ್ರಷ್ಟಾಚಾರಿಗಳು ಎಂದು ಹೇಳಿಕೆ ನೀಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಯ ಪರಿಣಾಮ ನೆನಪಿನಿಂದ ಮರೆಯಾಗುವ ಮುನ್ನವೇ ಪಕ್ಷದ ಮತ್ತೊಬ್ಬ ಮೇರು ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿಕೆ ನೀಡುವ ಭರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಷದ ಹಾವು ಎಂದು ಹೇಳಿರುವುದು ವಿವಾದ ಹುಟ್ಟು ಹಾಕಿದೆ.ಸಿದ್ದರಾಮಯ್ಯ ಅವರ ಲಿಂಗಾಯತ ಸಿಎಂಗಳು ಭ್ರಷ್ಟಾಚಾರಿಗಳು ಎಂಬ ಹೇಳಿಕೆಯಿಂದ ಲಿಂಗಾಯತರು ಭ್ರಷ್ಟಾಚಾರಿಗಳು ಎಂದು ಸಿದ್ದರಾಮಯ್ಯ ದೂಷಿಸಿದರು ಎಂಬಂತೆ ಸಂದೇಶ ರವಾನೆಯಾಗುವಂತೆ ಮಾಡಲು ಬಿಜೆಪಿ ತಂತ್ರಗಾರರು ಶ್ರಮಿಸಿದ್ದರು. ಇದೀಗ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಅವರನ್ನು ವಿಷ ಸರ್ಪ ಎನ್ನುವ ಮೂಲಕ ವೈಯಕ್ತಿಕ ಮಟ್ಟದ ಹೇಳಿಕೆ ನೀಡಿರುವುದು ಹೊಸ ಅಸ್ತ್ರವನ್ನು ಬಿಜೆಪಿಗೆ ನೀಡಿದಂತಾಗಿದೆ.