Asianet Suvarna News Asianet Suvarna News

Karnataka Election ಬೊಮ್ಮಾಯಿ ವಿರುದ್ಧ ಪ್ಲಾನ್ ಬದಲಿಸಿದ ಕಾಂಗ್ರೆಸ್, ಲಿಂಗಾಯಿತ ಅಭ್ಯರ್ಥಿಗೆ ಟಿಕೆಟ್!

ಈ ಬಾರಿಯ ಚುನಾವಣೆಗೆ ಕಾಂಗ್ರೆಸ್ ಭಾರಿ ಪ್ಲಾನ್ ಮಾಡಿದೆ. ಇಷ್ಟು ವರ್ಷ ಪಾಲಿಸಿಕೊಂಡು ಬರುತ್ತಿದ್ದ ಸಂಪ್ರದಾಯಕ್ಕೆ ಬ್ರೇಕ್ ಹಾಕಿ ಬಿಜೆಪಿ ಮಣಿಸಲು ಭಾರಿ ಲೆಕ್ಕಾಚಾರ ಮಾಡಿದೆ. ಸಿಎಂ ಬೊಮ್ಮಾಯಿ ಹಾಗೂ ಹುಬ್ಬಳ್ಳಿ ಕ್ಷೇತ್ರದಲ್ಲಿ ಈ ಪ್ರಯೋಗ ಮಾಡಲಾಗುತ್ತಿದೆ.

First Published Feb 24, 2023, 8:00 PM IST | Last Updated Feb 24, 2023, 8:00 PM IST

ಸಿಎಂ ಬಸವರಾಜ್ ಬೊಮ್ಮಾಯಿ ಕ್ಷೇತ್ರ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪ್ಲಾನ್ ಬದಲಿಸುತ್ತಿದೆ. ಇದುವರೆಗೆ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಪಂಚಮಸಾಲಿ ಸಮುದಾಯ ಹೆಚ್ಚಿರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಂಚಮಸಾಲಿ ನಾಯಕನಿಗೆ ಟಿಕೆಟ್ ನೀಡಲು ಮುಂದಾಗಿದೆ. ಈ ಮೂಲಕ ಕಾಂಗ್ರೆಸ್ ಬಸವರಾಜ್ ಬೊಮ್ಮಾಯಿ ಮಣಿಸಲು ಪ್ಲಾನ್ ಮಾಡಿದೆ. ಇತ್ತ ಹುಬ್ಬಳ್ಳಿಯಲ್ಲೂ ಇದೇ ರೀತಿ ಪ್ಲಾನ್ ಮಾಡಲು ಕಾಂಗ್ರೆಸ್ ಮುಂದಾಗಿದೆ. ಯಾವ ಸಮುದಾಯ, ಯಾವ ಜಾತಿ ಸಂಖ್ಯೆ ಹೆಚ್ಚಿದ ಅನ್ನೋ ಆಧಾರದಲ್ಲಿ ಆ ಸಮುದಾಯದ ನಾಯಕರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಸ್ಟಾಟರ್ಜಿ ಮಾಡಿದೆ.