Asianet Suvarna News Asianet Suvarna News

ನಮ್ಮ ಸ್ಟ್ಯಾಂಡ್ ಒಂದೇ,ನಮಗೆ ಬಹುಮತ: ಸಿ ಎಂ ಬೊಮ್ಮಾಯಿ

ಬಿಜೆಪಿಗೆ ಸ್ಪಷ್ಟ ಬಹುಮತ ಬರುತ್ತದೆ, . ನಾವು ಗೆಲ್ಲುವ ವಿಶ್ವಾಸ ಇದ್ದು, ಬಹುಮತದ ಗಡಿ ದಾಟುತ್ತೇವೆ ಎಂದು ಸಿ ಎಂ ಬಸವರಾಜ ಬೊಮ್ಮಾಯಿ‌ ಹೇಳಿದರು.

ಬಿಜೆಪಿಗೆ ಸ್ಪಷ್ಟ ಬಹುಮತ ಬರುತ್ತದೆ, . ನಾವು ಗೆಲ್ಲುವ ವಿಶ್ವಾಸ ಇದ್ದು, ಬಹುಮತದ ಗಡಿ ದಾಟುತ್ತೇವೆ ಎಂದು ಸಿ ಎಂ ಬಸವರಾಜ ಬೊಮ್ಮಾಯಿ‌ ಹೇಳಿದರು. ಮಾಧ್ಯಮದ ಜತೆ ಮಾತನಾಡಿದ ಅವರು ನಾನು ಮೊದಲಿಂದಲೂ ಒಂದೇ ಮಾತು ಹೇಳುತ್ತ ಬಂದಿದ್ದೇನೆ ಬಹುಮತದ ಗಡಿ ದಾಟುತ್ತೇವೆ. ಮ್ಯಾಜಿಕ್ ನಂಬರ್ ತಲುಪುತ್ತೇವೆ ಎಂದು ಹೇಳಿದರು. ಎಲ್ಲ ಕ್ಷೇತ್ರ, ಬೂತ್ ಗಳಿಂದ ಗ್ರೌಂಡ್ ಮಾಹಿತಿ ತರಿಸಿದ್ದೇವೆ. ಈಗ ನಮ್ಮ ಮುಂದೆ ಮೈತ್ರಿಯ ಪ್ರಶ್ನೆ ಇಲ್ಲ. ಕಾಂಗ್ರೆಸ್‌ನವರು ಏನೇ ಸಭೆ ಮಾಡಲಿ.  ಅವರಿಗೆ ಬಹುಮತ ಬರಲ್ಲ. ಹಾಗಾಗಿ ಬೇರೆ ಪಕ್ಷದವರ ಜತೆ ಮಾತನಾಡುವ ಪ್ರಯತ್ನ ಪಡ್ತಿದಾರೆ. ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲಅವರಿಗೆ ಸಭೆ ಮಾಡುವ ಹಕ್ಕಿದೆ. ಎಲ್ಲ ಪಕ್ಷಗಳೂ ಸಭೆ ಮಾಡುತ್ತಾರೆ‌‌ ಎಂದರು. ಇನ್ನು ಕಮಾಂಡ್‌ ವರಿಷ್ಠರಿಗೆ ಕರೆ ಮಾಡಿ ಇಲ್ಲಿನ ವಸ್ತುಸ್ಥಿತಿ ಬಗ್ಗೆ ನಾಯಕರಿಗೆ ತಿಳಿಸಿದ್ದೇನೆ. ಹೈಕಮಾಂಡ್ ನಾಯಕರು ಸಹ ಗೆಲ್ಲುವ ವಿಶ್ವಾಸದಲ್ಲಿದ್ದಾರೆ ಎಂದು ಸಿಎಂ ಹೇಳಿದರು,