ಬಿಜೆಪಿ ಶಾಸಕಾಂಗ ಸಭೆಯಲ್ಲಿ ಅಚ್ಚರಿಯ ಬೇಡಿಕೆ, ಪ್ರಚಾರಕ್ಕೆ ಮೋದಿಯೇ ಬೇಕಂತೆ!
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ರಾಜ್ಯ ಪ್ರವಾಸದಲ್ಲಿ ಇದ್ದು, ಶಾಸಕಾಂಗ ಪಕ್ಷದ ಸಭೆ ನಡೆದಿದೆ. ಈ ವೇಳೆ ಹಲವು ಶಾಸಕರು ನಮ್ಮ ಜಿಲ್ಲೆ, ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಾರೆ.
ಬೆಂಗಳೂರು (ಫೆ.16): ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ರಾಜ್ಯ ಪ್ರವಾಸದಲ್ಲಿ ಇದ್ದು, ಶಾಸಕಾಂಗ ಪಕ್ಷದ ಸಭೆ ನಡೆದಿದೆ. ಈ ವೇಳೆ ಬಿಜೆಪಿ ಎಲ್ಲಾ 224 ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಇದಕ್ಕೂ ಮುಖ್ಯವಾಗಿ ಚುನಾವಣೆ ಪ್ರಚಾರ ನಡೆಸಲು ಹಲವು ಶಾಸಕರು ನಮ್ಮ ಜಿಲ್ಲೆ, ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ವಿಶೇಷವಾಗಿ ಕಾರವಾರ, ವಿಜಯಪುರ, ಯಾದಗಿರಿಗೆ ಮೋದಿ ಬರುವಂತೆ ವಿಶೇಷ ಬೇಡಿಕೆ ಇಟ್ಟಿದ್ದಾರೆ. ಈ ಮೂಲಕ ಮೋದಿ ಬಂದರೆ ಸುಲಭ ಜಯ ಆಗಬಹುದೆಂದು ಶಾಸಕರು ಯೋಚನೆ ಮಾಡಿದ್ದಾರೆ. ಆಗಬಹುದಾದ ಹಿನ್ನಡೆಯನ್ನು ಸರಿ ಮಾಡಲು ಮೋದಿಯನ್ನು ಕರೆಯಿಸಿ ಎಂದು ಬೇಡಿಕೆ ಇಡಲಾಗಿದೆ ಎಂದು ತಿಳಿದುಬಂದಿದೆ.