Asianet Suvarna News Asianet Suvarna News

ಕಾಂಗ್ರೆಸ್ ಕಾರ್ಯಕ್ರಮಕ್ಕೆ ಜಮೀರ್ ಗೈರು, ಬೆಂಬಲಿಗರ ಗಲಾಟೆ, ಸಿದ್ದು ಭಾಷಣ ಮೊಟಕು, ಡಿಕೆಶಿ ಗರಂ

 ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಗೈರುಹಾಜರಾಗಿದ್ದ ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ. 

ಬೆಂಗಳೂರು (ನ. 17): ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಗೈರುಹಾಜರಾಗಿದ್ದ ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ. 

ಇಂದಿನಿಂದ 3 ದಿನ ಬೆಂಗಳೂರು ಟೆಕ್‌ಶೃಂಗ ಸಭೆ, 300 ಕ್ಕೂ ಹೆಚ್ಚು ಕಂಪನಿಳು, 5000 ನವೋದ್ಯಮ ಭಾಗಿ

ಅರಮನೆ ಮೈದಾನದ ನಲಪಾಡ್‌ ಪೆವಿಲಿಯನ್‌ನಲ್ಲಿ  ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷ ಅಬ್ದುಲ್‌ ಜಬ್ಬಾರ್‌ ಅವರ ಪದಗ್ರಹಣ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ನಾಯಕರಷ್ಟೇ ಅಲ್ಲದೆ, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಅಖಿಲ ಭಾರತ ಅಲ್ಪಸಂಖ್ಯಾತ ಕಾಂಗ್ರೆಸ್‌ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಇಮ್ರಾನ್‌ ಪ್ರತಾಪ್‌ ಗಡಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಆದರೆ, ಜಮೀರ್‌ ಅಹ್ಮದ್‌ ಅವರು ಈ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು.

 

Video Top Stories