Asianet Suvarna News Asianet Suvarna News

ಜಗನ್ ಜತೆ ಜನಾರ್ದನ ರೆಡ್ಡಿ ಮಾತುಕತೆ: ವೈಎಸ್‌ಆರ್‌ ಕಾಂಗ್ರೆಸ್‌ ಪಾರ್ಟಿಯಿಂದ ಸ್ಪರ್ಧೆ ?

ಗಂಗಾವತಿಯಿಂದ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ವೈಎಸ್‌ಆರ್‌ ಕಾಂಗ್ರೆಸ್‌ ಪಾರ್ಟಿಯಿಂದ ಸ್ಪರ್ಧೆ ಮಾಡಲಿದ್ದಾರಾ ಎಂಬ ಪ್ರಶ್ನೆ ಮೂಡಿದೆ.
 

First Published Dec 10, 2022, 4:30 PM IST | Last Updated Dec 10, 2022, 4:30 PM IST

ಜನಾರ್ದನ ರೆಡ್ಡಿ ಅವರ ರಾಜಕೀಯ ರೀ ಎಂಟ್ರಿ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ. ಅವರು ಆಂಧ್ರ ಪ್ರದೇಶದ ವೈಎಸ್‌ಆರ್‌ ಕಾಂಗ್ರೆಸ್‌ ಪಾರ್ಟಿಯಿಂದ ಗಂಗಾವತಿಯಲ್ಲಿ ಕಣಕ್ಕಿಳಿಯುತ್ತಾರಾ ಎಂಬ ಚರ್ಚೆ ಶುರುವಾಗಿದೆ. ಈಗಾಗಲೇ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ‌ ಜತೆ ಒಂದು ಚರ್ಚೆ ನಡೆಸಿದ್ದಾರೆ. ಜಗನ್‌ ತಂದೆ ರಾಜಶೇಖರ್‌ ಜತೆ ಸ್ನೇಹ ಹೊಂದಿದ್ದ ರೆಡ್ಡಿ , ಪರೋಕ್ಷವಾಗಿ ಬಿಜೆಪಿ ಹೈಕಮಾಂಡ್‌ಗೆ ಗಡುವು ನೀಡಿದ್ದಾರೆ.