ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟ ವಿವಾದಕ್ಕೆ ಬಿಗ್ ಟ್ವಿಸ್ಟ್
ರಕ್ಷಾ ರಾಮಯ್ಯ ಹಾಗೂ ಮೊಹಮ್ಮದ್ ನಲಪಾಡ್ ಇಬ್ಬರಿಗೂ ಡಿಕೆಶಿ ಅಧಿಕಾರ ಹಂಚಿಕೆ ಮಾಡಿದ್ದರು. ಆದ್ರೆ, ಇದೀಗ ಇದೀಗ ಅದಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಬೆಂಗಳೂರು, (ಜೂನ್.30): ಕರ್ನಾಟ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟ ಗೊಂದಲ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ನಿನ್ನೆ (ಜೂ.29) ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಂಧಾನ ಮಾಡಿ ಇಬ್ಬರಿಗೂ ಅಧಿಕಾರ ಹಂಚಿಕೆ ಮಾಡಿ ವಿವಾದವನ್ನು ಸುಖಾಂತ್ಯ ಮಾಡಿದ್ದರು.
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟ ವಿವಾದ ಕೊನೆಗೂ ಸುಖಾಂತ್ಯ
ರಕ್ಷಾ ರಾಮಯ್ಯ ಹಾಗೂ ಮೊಹಮ್ಮದ್ ನಲಪಾಡ್ ಇಬ್ಬರಿಗೂ ಅಧಿಕಾರ ಹಂಚಿಕೆ ಮಾಡಿದ್ದರು. ಆದ್ರೆ, ಇದೀಗ ಇದೀಗ ಅದಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಲಪಾಡ್ಗೆ ಭಾರೀ ಹಿನ್ನಡೆಯಾಗಿದೆ. ಈ ಮೂಲಕ ನಲಪಾಡ್ ಪರ ಬ್ಯಾಟಿಂಗ್ ಮಾಡಿದ್ದ ಡಿಕೆಶಿಗೂ ಮುಖಭಂಗವಾಗಿದೆ.