ಮತ್ತೆ ದೆಹಲಿಗೆ ತೆರಳಿದ ಸಚಿವ ಮುನಿಯಪ್ಪ: ಕೇಂದ್ರದಿಂದ ಅಕ್ಕಿ ತರಲು ಕೊನೆ ಕ್ಷಣದವರೆಗೆ ತಂತ್ರ !

ಕೇಂದ್ರ ಆಹಾರ ಸಚಿವ ಗೋಯಲ್ ಸಚಿವ ಕೆ.ಹೆಚ್‌.ಮುನಿಯಪ್ಪ ಭೇಟಿಗೆ ಅವಕಾಶ ಕೊಟ್ಟಿದ್ದಾರೆ.
 

Share this Video
  • FB
  • Linkdin
  • Whatsapp

ಕೇಂದ್ರ ಸಚಿವ ಪಿಯೂಷ್​ ಗೋಯಲ್ ರಾಜ್ಯ ಆಹಾರ ಸಚಿವ ಕೆ.ಹೆಚ್‌. ಮುನಿಯಪ್ಪ ಭೇಟಿಗೆ​ ಅವಕಾಶ ಕೊಟ್ಟಿದ್ದಾರೆ. ಸಚಿವ ಮುನಿಯಪ್ಪ ಬೆಳಗ್ಗೆ 7.30ರ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಪಿಯೂಷ್‌ ಗೋಯಲ್‌ ಭೇಟಿ ವೇಳೆ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಸುವಂತೆ ಮನವಿ ಮಾಡಲಿದ್ದಾರೆ. ಸದ್ಯ ರಾಜ್ಯ ಸರ್ಕಾರ ಅನ್ನಭಾಗ್ಯಕ್ಕೆ ಅಕ್ಕಿ ಪೂರೈಸಲು ಹರಸಾಹಸ ಪಡುತ್ತಿದೆ. ಹಾಗಾಗಿ ಕೇಂದ್ರ ಸಚಿವರ ಈ ಭೇಟಿ ತುಂಬಾ ಮುಖ್ಯವಾಗಿದೆ. ಕಾಂಗ್ರೆಸ್ ಸರ್ಕಾರ ಚುನಾವಣೆ ಸಮಯದಲ್ಲಿ 10 ಕೆ.ಜಿ ಅಕ್ಕಿ ಕೊಡುವುದಾಗಿ ಘೋಷಿಸಿತ್ತು. ಒಂದು ವೇಳೆ ಎಫ್‌ಸಿಐನಿಂದ ಅಕ್ಕಿ ಸಿಕ್ಕರೇ, ರಾಜ್ಯ ಸರ್ಕಾರದ ಹೊರೆ ಕಡಿಮೆಯಾಗಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ವೀಕ್ಷಿಸಿ: ಪಾಟ್ನಾದಲ್ಲಿಂದು ಮಹಾಘಟಬಂಧನ್‌ ಮೀಟಿಂಗ್‌: ಮೋದಿ ಕಟ್ಟಿಹಾಕಲು ವಿಪಕ್ಷ ನಾಯಕರ ರಣತಂತ್ರ!

Related Video