
ಪ್ರಧಾನಿ ಮೋದಿ ಪ್ರತಿಯೊಬ್ಬರನ್ನು ಈ ಮಣ್ಣಿನ ಮಕ್ಕಳಂತೆ ನೋಡುತ್ತಾರೆ: ಕೋಟಾ ಶ್ರೀನಿವಾಸ್ ಪೂಜಾರಿ
ಬಿಜೆಪಿಯ ಮಾಜಿ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಹಲವಾರು ವಿಷಯಗಳ ಕುರಿತು ಮಾತನಾಡಿದ್ದಾರೆ. ಇದರ ವಿಡಿಯೋ ಇಲ್ಲಿದೆ..
ಉಡುಪಿ ಕಾಲೇಜುವೊಂದರಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋವನ್ನು ಮುಸ್ಲಿಂ ಹುಡುಗಿಯರು ಶೂಟ್ ಮಾಡಿದ ಪ್ರಕರಣ ನಡೆದಿತ್ತು. ಈ ಪ್ರಕರಣ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಬಿಜೆಪಿ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ (Kota Srinivas Pujari) ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಲಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಹಾಗೂ ಸರ್ಕಾರ ನಿರ್ಲಕ್ಷ್ಯ ಮಾಡಿದ್ದರಿಂದ ಇದು ಇಷ್ಟು ದೊಡ್ಡದಾಗಿದೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಈ ದೇಶದ ಪ್ರತಿಯೊಬ್ಬರನ್ನು ಈ ಮಣ್ಣಿನ ಪುತ್ರರಂತೆ ನೋಡುತ್ತಾರೆ. ಅಲ್ಪಸಂಖ್ಯಾತರನ್ನು ನಮ್ಮ ಪಕ್ಷ ಕಡೆಗಣಿಸುತ್ತಿಲ್ಲ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
Add Asianetnews Kannada as a Preferred Source

ಇದನ್ನೂ ವೀಕ್ಷಿಸಿ: Today Rashibhavishy: ಇಂದು ತುಲಾ ರಾಶಿಯವರು ಹೆಚ್ಚು ವ್ಯಯ ಮಾಡಲಿದ್ದು, ವೃತ್ತಿಯಲ್ಲಿ ಮಿಶ್ರಫಲ