Asianet Suvarna News Asianet Suvarna News

ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್!

 ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಸಭೆಯ ನಡೆಯುತ್ತಿದೆ. ಇನ್ನೂ ಸಭೆ ಆರಂಭಕ್ಕೂ ಮುನ್ನ ರಾಜಕೀಯ ಪಕ್ಷಗಳ ನಾಯಕರು  ಒಬ್ಬರಿಗೊಬ್ಬರು ಕುಶಲೋಪರಿ ವಿಚಾರಿಸಿದರು. 

ಬೆಂಗಳೂರು, (ಏ.20): ರಾಜ್ಯದಲ್ಲಿ ಕೊರೋನಾ 2ನೇ ಅಲೆ ನಿಯಂತ್ರಣ ಹಿನ್ನೆಲೆ ರಾಜ್ಯಪಾಲ ವಜೂಭಾಯ್ ವಾಲಾ ನೇತೃತ್ವದಲ್ಲಿ ವರ್ಚುವಲ್ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಹಲವು ನಾಯಕರು ಭಾಗಿಯಾಗಿದ್ದಾರೆ.

ಸರ್ವಪಕ್ಷಗಳ ಸಭೆಯಲ್ಲಿ ಅಚ್ಚರಿ ಸಲಹೆ ಕೊಟ್ಟ ಮಾಜಿ ಸಿಎಂ ಕುಮಾರಸ್ವಾಮಿ!

 ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಸಭೆಯ ನಡೆಯುತ್ತಿದೆ. ಇನ್ನೂ ಸಭೆ ಆರಂಭಕ್ಕೂ ಮುನ್ನ ರಾಜಕೀಯ ಪಕ್ಷಗಳ ನಾಯಕರು  ಒಬ್ಬರಿಗೊಬ್ಬರು ಕುಶಲೋಪರಿ ವಿಚಾರಿಸಿದರು. ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೊರೋನಾ ಸೊಂಕಿನಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಬಿ,.ಎಸ್. ಯಡಿಯೂರಪ್ಪನವರ ಆರೋಗ್ಯದ ಬಗ್ಗೆ ವಿಚಾರಿಸಿದರು.