Karnataka Congress Politics: ಸಿದ್ದರಾಮಯ್ಯ ಆಪ್ತ ಆಶೋಕ ಪಟ್ಟಣ್‌ಗೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್!

*'ಕೈ' ಪಾಳಯದಲ್ಲಿ ಸಿದ್ದು Vs ಡಿಕೆಶಿ ಅಂತರ್ಯುದ್ಧ
*ಡಿಕೆಶಿ ಬಗ್ಗೆ ಗುಸು ಗುಸು: ಸಿದ್ದು ಆಪ್ತ ಪಟ್ಟಣ್‌ಗೆ ಕೆಪಿಸಿಸಿ ನೋಟಿಸ್‌
*ಕಾರಣ ಕೇಳಿದ  ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ.ರೆಹಮಾನ್‌ 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 02): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D K Shivakumar) ಅವರ ವಿರುದ್ಧ ಮಾತನಾಡಿರುವ ವಿಡಿಯೋಗೆ ಸಂಬಂಧಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (siddaramaiah) ಅವರ ಆಪ್ತ, ಮಾಜಿ ಶಾಸಕ ಅಶೋಕ್‌ ಪಟ್ಟಣ್‌ ( Ashok Pattanshetti) ಅವರಿಗೆ ಸಮುಜಾಯಿಷಿ ಕೇಳಿ ಕಾಂಗ್ರೆಸ್‌ ಪಕ್ಷ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ.ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ.ರೆಹಮಾನ್‌ ಖಾನ್‌ ಅವರು, ಅಶೋಕ್‌ ಪಟ್ಟಣ್‌ ಅವರಿಗೆ ಅಶಿಸ್ತಿನ ನಡವಳಿಕೆಗಾಗಿ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ಓದಿ: Karnataka Politcs: ನನ್ನ ಹುದ್ದೆಗೂ, ಇಬ್ರಾಹಿಂ ವಿಚಾರಕ್ಕೂ ಸಂಬಂಧ ಇಲ್ಲ: ಖಾದರ್‌

ಪಕ್ಷದ ನಾಯಕರೂ, ಅನುಭವಿ ಶಾಸಕರೂ ಆಗಿ ತಿಳಿದಿರುವವರೂ ಆದ ತಾವು ಖಾಸಗಿಯಾಗಿ ಮಾತನಾಡುವಾಗ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರ ಘನತೆ-ಗೌರವಗಳಿಗೆ ಕುಂದುಂಟಾಗುವಂತೆ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ಅಪಾರ ಹಾನಿಯಾಗುವಂಥ ವಿಚಾರಗಳನ್ನು ಮಾತನಾಡಿರುವುದು ದೃಶ್ಯ ಮಾಧ್ಯಮಗಳಲ್ಲಿ ಹಾಗೂ ಪತ್ರಿಕಾ ಮಾಧ್ಯಮಗಳಲ್ಲಿ ವರದಿಯಾಗಿದೆ. ತಾವು ಈ ಸಂದರ್ಭದಲ್ಲಿ ಮಾತನಾಡಿಕೊಂಡಿರುವ ವಿಚಾರಗಳು ಆಧಾರರಹಿತವಾಗಿದ್ದು, ಕಾಂಗ್ರೆಸ್‌ ಪಕ್ಷವು ಇದನ್ನು ಸಂಪೂರ್ಣವಾಗಿ ಖಂಡಿಸುತ್ತದೆ ಮತ್ತು ನಿರಾಕರಿಸುತ್ತದೆ. ತಮ್ಮ ಈ ವರ್ತನೆಯಿಂದ ಪಕ್ಷದ ಘನತೆ ಗೌರವಗಳಿಗೆ ಕುಂದುಂಟಾಗಿದೆ. ಜತೆಗೆ ಅದು ಪಕ್ಷ ವಿರೋಧಿ ಚಟುವಟಿಕೆಯೂ ಆಗಿದೆ. ಈ ಹಿನ್ನೆಲೆಯಲ್ಲಿ ತಾವು ತಮ್ಮ ನಡವಳಿಕೆ ಬಗ್ಗೆ ಏಳು ದಿನಗಳೊಳಗಾಗಿ ಸಮಜಾಯಿಷಿ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಿದ್ದಾರೆ.

Related Video