ಸ್ಪೀಕರ್ ಕಾಗೇರಿ ಸುತ್ತೋಲೆಗೆ ಕೈ ನಾಯಕರು ಕೆಂಡಾಮಂಡಲ: ಏನದು ಆದೇಶ..?
ಕರ್ನಾಟಕ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಈ ನಡೆಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೆಂಡಾಮಂಡಲಾಗಿದ್ದಾರೆ.
ಬೆಂಗಳೂರು, [ಜ.30]: ಶಾಸಕರಿಗೆ ಸ್ಪೀಕರ್ ಕಾಗೇರಿ ಎಚ್ಚರಿಕೆ ನೀಡುವ ರೀತಿಯ ಆದೇಶವನ್ನು ಹೊರಡಿಸಿದ್ದು, ಇದು ಭಾರಿ ವಿವಾದ ಸೃಷ್ಟಿಸಿದೆ.
ಈ ಬಾರಿ ಬಜೆಟ್ ಲ್ಲಿ ರೈತರಿಗೆ ಆದ್ಯತೆ ಎಂದ ಸಿಎಂ BSY : ಬಂಪರ್ ಕೊಡುಗೆ ನಿರೀಕ್ಷೆ
ಜಂಟಿ ಅಧಿವೇಶನದ ವೇಳೆ ರಾಜ್ಯಪಾಲರ ಭಾಷಣಕ್ಕೆ ಯಾವುದೇ ಸದಸ್ಯರು ಅಡ್ಡಿಪಡಿಸುವುದು ಇಲ್ಲವೇ ಕ್ರಿಯಾಲೋಪ ಎತ್ತಿದರೆ ಅಂತಹ ಸದಸ್ಯರನ್ನು ಅಮಾನತುಪಡಿಸುವುದಾಗಿ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೊರಡಿಸಿರುವ ಅಧಿಸೂಚನೆ ಹೊರಡಿಸಿದ್ದಾರೆ. ಆದ್ರೆ, ಇದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಕರ್ನಾಟಕ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಈ ನಡೆಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೆಂಡಾಮಂಡಲಾಗಿದ್ದಾರೆ.