Asianet Suvarna News Asianet Suvarna News

ಸಿದ್ದು ಕ್ಷೇತ್ರ ಆಯ್ಕೆ ಮಾಡಿಕೊಳ್ತಾರೆ, ಗೆಲ್ತಾರೆ, ನಿಮ್ ಸಿಂಪಥಿ ಬೇಡ: ಎಚ್‌ಡಿಕೆಗೆ ಟಾಂಗ್‌ ಕೊಟ್ಟ ಡಿಕೆಶಿ

ಸಿದ್ದರಾಮಯ್ಯರನ್ನ ರಾಜ್ಯದ ಜನ ಹತ್ತಾರು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರೇ ತಮ್ಮ ಕ್ಷೇತ್ರವನ್ನ ಆಯ್ಕೆ ಮಾಡಿಕೊಳ್ತಾರೆ, ಎಲ್ಲೇ ನಿಂತರೂ ಕೂಡ ಗೆದ್ದೇ ಗೆಲ್ತಾರೆ, ನಿಮ್ಮ ಸಿಂಪಥಿ ಬೇಡ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ 

ಬೆಂಗಳೂರು(ಮಾ.22): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷೇತ್ರ ಆಯ್ಕೆ ಮಾಡಿಕೊಳ್ತಾರೆ, ಗೆಲ್ತಾರೆ, ನಿಮ್ ಸಿಂಪಥಿ ಬೇಡ ಅಂತ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯರನ್ನ ಸೋಲಿಸಲು ಕಾಂಗ್ರೆಸ್‌ನಲ್ಲೇ ಸ್ಕೆಚ್‌ ಹಾಕಲಾಗಿದೆ ಅಂತ ಕುಮಾರಸ್ವಾಮಿ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ಸಿದ್ದರಾಮಯ್ಯರನ್ನ ರಾಜ್ಯದ ಜನ ಹತ್ತಾರು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರೇ ತಮ್ಮ ಕ್ಷೇತ್ರವನ್ನ ಆಯ್ಕೆ ಮಾಡಿಕೊಳ್ತಾರೆ, ಎಲ್ಲೇ ನಿಂತರೂ ಕೂಡ ಗೆದ್ದೇ ಗೆಲ್ತಾರೆ, ನಿಮ್ಮ ಸಿಂಪಥಿ ಬೇಡ ಅಂತ ಹೇಳಿದ್ದಾರೆ. 

ಐತಿಹಾಸಿಕ ವಿಜಯ ಸಂಕಲ್ಪ ಸಮಾರೋಪ ಸಮಾವೇಶಕ್ಕೆ ಪ್ರಧಾನಿ ಮೋದಿ, ಭರ್ಜರಿ ಸಿದ್ಧತೆ

Video Top Stories