Asianet Suvarna News Asianet Suvarna News

'ನಿಮ್ಮ ತಂದೆ ಕಾಂಗ್ರೆಸ್ ಶಾಲು ಹಾಕಿ ರಾಜಕೀಯಕ್ಕೆ ಬಂದ್ರು'

ನಗರದಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಕೆಪಿಸಿಸಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
 

ಬೆಂಗಳೂರು, (ಡಿ.28): ನಗರದಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಕೆಪಿಸಿಸಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಆಪ್ತನನ್ನ ಜೆಡಿಎಸ್‌ಗೆ ಕರೆತರಲು ಕುಮಾರಸ್ವಾಮಿ ಯತ್ನ..! 

ನಾನು ಹಸಿರು ಟವಲ್ ಹಾಕಿಕೊಂಡು ರೈತರ ಹೋರಾಟಕ್ಕೆ ಹೋಗಿದ್ದಕ್ಕೆ, ಕಾಂಗ್ರೆಸ್ ಶಾಲು​ಗೆ ವ್ಯಾಲ್ಯೂ ಇಲ್ಲ, ಅದಕ್ಕೆ ಹಸಿರು ಶಾಲು ಹಾಕ್ಕೊಂಡಿದ್ದಾರೆ ಅಂತ ಹೇಳಿದ್ರು. ನಾನೂ ಕೂಡ ಬಹಳ ಕೇಳಿಕೊಂಡು ತಾಳ್ಮೆಯಿಂದ ಇದ್ದೆ. ನಿಮ್ಮ ತಂದೆ ಅವರನ್ನ ಪ್ರಧಾನಿ ಮಾಡಿದ್ದು ಇದೇ ಕಾಂಗ್ರೆಸ್ ಶಾಲು, ನಿಮ್ಮನ್ನ ಎರಡನೇ ಬಾರಿ ಸಿಎಂ ಮಾಡಿದ್ದು ಇದೇ ಕಾಂಗ್ರೆಸ್ ಶಾಲು ಎಂದು ಗುಡುಗಿದರು.