ಬಿಎಸ್ವೈ ಸರ್ಕಾರದ ಲೋಪಗಳನ್ನು ಜನರಿಗೆ ತಲುಪಿಸಲು 'ಕೈ' ತಂತ್ರ
ಕೇಸರಿ ಪಡೆಯನ್ನು ಕಟ್ಟಿ ಹಾಕಲು 'ಕೈ' ಪಡೆ ಹೊಸ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಪಕ್ಷ ಸಂಘಟನೆಯನ್ನು ತೀವ್ರಗೊಳಿಸಲು ಮಾರ್ಚ್ನಲ್ಲಿ ವಿಧಾನಸಭಾ ಕ್ಷೇತ್ರವಾರು ಪ್ರವಾಸ ಆರಂಭಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಬೆಂಗಳೂರು (ಫೆ. 04): ಪಕ್ಷ ಸಂಘಟನೆಯನ್ನು ತೀವ್ರಗೊಳಿಸಲು ಮಾರ್ಚ್ನಲ್ಲಿ ವಿಧಾನಸಭಾ ಕ್ಷೇತ್ರವಾರು ಪ್ರವಾಸ ಆರಂಭಿಸಲು ಕಾಂಗ್ರೆಸ್ ನಿರ್ಧರಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರವಾಸ ನಡೆಯಲಿದೆ. ಪ್ರವಾಸದ ವೇಳೆ ರೈತ ವಿರೋಧಿ ಕೃಷಿ ಕಾಯ್ದೆಗಳು, ಇಂಧನ ಬೆಲೆ ಏರಿಕೆ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಬಗ್ಗೆ ಜನ ಜಾಗೃತಿ ಮೂಡಿಸಲು ತೀರ್ಮಾನಿಸಲಾಗಿದೆ.