ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ತಂತ್ರ, ಇಂದಿನಿಂದ ಸೋತ ಕ್ಷೇತ್ರಗಳಿಗೆ ಸಿದ್ದು ಡಿಕೆಶಿ ಜಂಟಿ ಯಾತ್ರೆ
ಸೋತ ಕ್ಷೇತ್ರಗಳಲ್ಲಿ ಪಕ್ಷ ಬಲಪಡಿಸಲು ಇಂದಿನಿಂದ ಕೈ ನಾಯಕರು ಪ್ರವಾಸ ಕೈಗೊಂಡಿದ್ದಾರೆ. ಮೇಖ್ರಿ ಸರ್ಕಲ್ ನಿಂದ ಯುವ ಕಾಂಗ್ರೆಸ್ ಕಾರ್ಯಕರ್ತರ ಬೈಕ್ ರ್ಯಾಲಿ ಹೊರಟಿದ್ದು, ರ್ಯಾಲಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭಾಗಿಯಾಗಿದ್ದಾರೆ.
ಬೆಂಗಳೂರು (ಮಾ. 03): ಸೋತ ಕ್ಷೇತ್ರಗಳಲ್ಲಿ ಪಕ್ಷ ಬಲಪಡಿಸಲು ಇಂದಿನಿಂದ ಕೈ ನಾಯಕರು ಪ್ರವಾಸ ಕೈಗೊಂಡಿದ್ದಾರೆ.
ಮೇಖ್ರಿ ಸರ್ಕಲ್ ನಿಂದ ಯುವ ಕಾಂಗ್ರೆಸ್ ಕಾರ್ಯಕರ್ತರ ಬೈಕ್ ರ್ಯಾಲಿ ಹೊರಟಿದ್ದು, ರ್ಯಾಲಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭಾಗಿಯಾಗಿದ್ದಾರೆ. ದೇವನಹಳ್ಳಿಯಲ್ಲಿ ಮೊದಲ ಜನಧ್ವನಿ ಕಾರ್ಯಕ್ರಮ.,ಬಳಿಕ ಚಿಕ್ಕಬಳ್ಳಾಪುರದಲ್ಲಿಯೂ ಸಾರ್ವಜನಿಕ ಸಭೆ ನಡೆಯಲಿದೆ. ದೇವನಹಳ್ಳಿ ಬಳಿ ಅಂಜನೇಯ ಟೆಂಪಲ್ ಹಾಗೂ ದರ್ಗಾಗೆ ಭೇಟಿ ನೀಡಿ ಒಂದು ಕಿ.ಲೋ ಮೀಟರ್ ಪಾದಯಾತ್ರೆ ನಡೆಯಲಿದೆ.