
Karnataka Politics ಈಶ್ವರಪ್ಪರನ್ನ ಸಚಿವ ಸಂಪುಟದಿಂದ ಕೈಬಿಡುವಂತೆ ಪಟ್ಟು
ವಿಧಾನಪರಿಷತ್ ಸದಸ್ಯ ಸಲೀಂ ಅಹಮ್ಮದ್ ಏಷ್ಯಾನಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದು, ಈಶ್ವರಪ್ಪ ರಾಷ್ಟ್ರದ್ರೋಹಿ. ಅವರನ್ನ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿದರು.
ಬೆಂಗಳೂರು, (ಫೆ.17): ರಾಷ್ಟ್ರಧ್ವಜ ಬದಲಾವಣೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿರುವ ಕಾಂಗ್ರೆಸ್ ಶಾಸಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ ಘೋಷಿಸಿದ್ದಾರೆ.
Add Asianetnews Kannada as a Preferred Source

Karnataka Politics ಹೊರಗಡೆ ಹಿಜಾಬ್ ಕಿಚ್ಚು, ಸದನದೊಳಗೆ ಧ್ವಜ ಕದನ
ಇನ್ನು ಈ ಬಗ್ಗೆ ವಿಧಾನಪರಿಷತ್ ಸದಸ್ಯ ಸಲೀಂ ಅಹಮ್ಮದ್ ಏಷ್ಯಾನಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದು, ಈಶ್ವರಪ್ಪ ರಾಷ್ಟ್ರದ್ರೋಹಿ. ಅವರನ್ನ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿದರು.
ಇದೇ ವೇಳೆ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಇಷ್ಟು ವರ್ಷ ಇಲ್ಲದ ಸಮಸ್ಯೆ ಬಿಜೆಪಿ ಅವಧಿಯಲ್ಲೇ ಯಾಕೆ? ಕೋರ್ಟ್ ಏನು ಆದೇಶಕ್ಕೆ ಕೊಡುತ್ತೆ ಅದಕ್ಕೆ ನಾವು ಬದ್ಧ ಎಂದು ಸ್ಪಷ್ಟಪಡಿಸಿದರು.