
ಜೀವಂತವಾಗಿ ಸಿದ್ದರಾಮಯ್ಯರನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ: ಕೆ.ಎಸ್ ಈಶ್ವರಪ್ಪ ವ್ಯಂಗ್ಯ
ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಚಿವ ಈಶ್ವರಪ್ಪ ಟಾಂಗ್ ನೀಡಿದ್ದಾರೆ.
ಜೀವಂತವಾಗಿ ನಾವು ಸಿದ್ದರಾಮಯ್ಯರನ್ನು ಬಿಜೆಪಿ ಪಾರ್ಟಿಗೆ ಸೇರಿಸಿಕೊಳ್ಳಲ್ಲ. ಇನ್ನು ಸಿದ್ದರಾಮಯ್ಯ ಹೆಣ ತೆಗೆದುಕೊಂಡು ನಾವೇನು ಮಾಡೋಣ ಎಂದು ಮಾಜಿ ಸಚಿವ ಈಶ್ವರಪ್ಪ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ ಹೆಣವನ್ನು ನಾಯಿಯೂ ಮೂಸಲ್ಲ ಎಂದು ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಿದ್ದರಾಮಯ್ಯ ಬಿಜೆಪಿಗೆ ಬರುತ್ತಾರೆ ಎನ್ನುವ ಹೇಳಿಕೆಗೆ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಗಿ ಮಾತನಾಡಿದ್ರು. ಈ ಸಮಯದಲ್ಲಿ ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ ಎಂದಿದ್ದರು ಸಿದ್ದರಾಮಯ್ಯ. ಹಾಗಾಗಿ ಈಶ್ವರಪ್ಪ ಟಾಂಗ್ ಕೊಟ್ಟಿದ್ದಾರೆ.
Add Asianetnews Kannada as a Preferred Source
