ಬೆಳಗಾವಿ ಬೈ ಎಲೆಕ್ಷನ್ ಅಖಾಡ, ಉಲ್ಟಾ ಹೊಡೆದ ಲಖನ್, ಸತೀಶ್ ಜಾರಕಿಹೊಳಿ ಏಕಾಂಗಿ!
ಬೆಳಗಾವಿ ಬೈಎಲೆಕ್ಷನ್ ಅಖಾಡದಲ್ಲಿ ರಾಜಕೀಯ ಲೆಕ್ಕಾಚಾರಗಳು ಜೋರಾಗಿದೆ. ಒಂದು ಕಡೆ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಬಿಜೆಪಿ ಪ್ರಚಾರದಿಂದ ಅಂತರ ಕಾಯ್ದುಕೊಂಡಿದ್ದಾರೆ.
ಬೆಂಗಳೂರು (ಏ. 08): ಬೆಳಗಾವಿ ಬೈಎಲೆಕ್ಷನ್ ಅಖಾಡದಲ್ಲಿ ರಾಜಕೀಯ ಲೆಕ್ಕಾಚಾರಗಳು ಜೋರಾಗಿದೆ. ಒಂದು ಕಡೆ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಬಿಜೆಪಿ ಪ್ರಚಾರದಿಂದ ಅಂತರ ಕಾಯ್ದುಕೊಂಡಿದ್ದಾರೆ. ಇನ್ನೊಂದು ಕಡೆ ಬಿಜೆಪಿ ಸೇರ್ಪಡೆಯಾಗುವಂತೆ ಸಚಿವರಾದ ಜಗದೀಶ ಶೆಟ್ಟರ್, ಭೈರತಿ ಬಸವರಾಜ, ಉಮೇಶ ಕತ್ತಿ ಹಾಗೂ ಬಿಜೆಪಿ ನಾಯಕರು ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಅವರ ಮನೆಗೆ ಭೇಟಿ ನೀಡಿ ಆಹ್ವಾನ ನೀಡಿದ್ದಾರೆ.
ಪರೀಕ್ಷಾ ಪೇ ಚರ್ಚಾ; ಮಕ್ಕಳಿಗೆ ಮೇಷ್ಟ್ರಾದ ಮೋದಿ, ಅದ್ಭುತ ಪಾಠ, ವಿಡಿಯೋ
ಕಳೆದ ಮೂರ್ನಾಲ್ಕು ದಿನಗಳ ಹಿಂದಷ್ಟೇ ಲಖನ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಈಗ ಕಾಂಗ್ರೆಸ್ನಲ್ಲಿದ್ದರೂ, ತಮ್ಮ ಸಹೋದರ ಸತೀಶ್ ಜಾರಕಿಹೊಳಿ ಅವರೇ ಅಭ್ಯರ್ಥಯಾಗಿದ್ದರೂ ಬಿಜೆಪಿ ಅಭ್ಯರ್ಥಿ ಬೆಂಬಲಿಸುವುದಾಗಿ ಘೋಷಣೆ ಮಾಡಿದ್ದಾರೆ.