Asianet Suvarna News Asianet Suvarna News

ಲಿಂಗಾಯತ ವಿರೋಧಿ ಹಣೆಪಟ್ಟಿ: 'ಕೈ'ಗೆ ಟಕ್ಕರ್‌ ಕೊಡಲು ಬಿಜೆಪಿ ಹೊಸ ಅಸ್ತ್ರ!

ಬಿಎಸ್‌ವೈ ನೇತೃತ್ವದಲ್ಲಿ ಲಿಂಗಾಯತ ಮುಖಂಡರ ಸಭೆ
ಡ್ಯಾಮೇಜ್‌ ಕಂಟ್ರೋಲ್‌ಗೆ ಬಿಜೆಪಿ ಹೈಕಮಾಂಡ್‌ ಪ್ಲ್ಯಾನ್‌
ಪಕ್ಷದ ಮೇಲೆ ಆಗಬಹುದಾದ ಪರಿಣಾಮದ ಬಗ್ಗೆ ಚರ್ಚೆ

First Published Apr 20, 2023, 12:57 PM IST | Last Updated Apr 20, 2023, 12:57 PM IST

ಬೆಂಗಳೂರು: ವಿಧಾನಸಭಾ ಚುನಾವಣೆಗೂ ಮುನ್ನ ಜಗದೀಶ್‌ ಶೆಟ್ಟರ್‌ ಮತ್ತು ಲಕ್ಷ್ಮಣ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.  ಇವರು ಬಿಜೆಪಿಗೆ ಗುಡ್‌ಬೈ ಹೇಳಿದ ಬೆನ್ನಲೇ ಡ್ಯಾಮೇಜ್‌ ಕಂಟ್ರೋಲ್‌ಗೆ ಬಿಜೆಪಿ ನಾಯಕರು ಮುಂದಾಗಿದ್ದಾರೆ.ಹೀಗಾಗಿ ಯಡಿಯೂರಪ್ಪ ನೇತೃತ್ವದಲ್ಲಿ ಲಿಂಗಾಯತ ನಾಯಕರ ಸಭೆ ಮಾಡಲಾಗಿದೆ.ಈ ಸಭೆಯಲ್ಲಿ ಪಕ್ಷದ ಮೇಲೆ ಆಗಬಹುದಾದ ಪರಿಣಾಮದ ಬಗ್ಗೆ ಚರ್ಚೆ ನಡೆಸಲಾಗಿದೆ ಎನ್ನಲಾಗ್ತಿದೆ. ಕಾಂಗ್ರೆಸ್‌ಗೆ ಲಿಂಗಾಯತರ ಸಿಎಂ ಸವಾಲು ಹಾಕಲು ಪ್ಲ್ಯಾನ್ ಮಾಡಲಾಗಿದೆ. ಅಲ್ಲದೇ ಬಿಜೆಪಿಯಿಂದ ಲಿಂಗಾಯತ ಸಮುದಾಯ ದೂರವಾಗದಂತೆ ತಡೆಯುವ ಬಗ್ಗೆ ಸಹ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಲಿಂಗಾಯತರನ್ನೇ ಸಿಎಂ ಮಾಡುತ್ತೇವೆ ಎಂದು ಹೇಳುವ ಮೂಲಕ ಪ್ರಚಾರ ಮಾಡುವಂತೆ ಸೂಚಿಸಲಾಗಿದೆ ಎನ್ನಲಾಗ್ತಿದೆ. 

ಇದನ್ನೂ ವೀಕ್ಷಿಸಿ: ಮರಾಠ ಮತಗಳ ಮೇಲೆ ಪಕ್ಷಗಳ ಕಣ್ಣು: ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ 'ಮಹಾ' ನಾಯಕರು