ಕೋಲಾರದ ಇಒ ವೆಂಕಟೇಶಪ್ಪ ಮನೆ ಮೇಲೆ ಲೋಕಾಯಕ್ತ ದಾಳಿ: ಬಿದ್ದು ಒದ್ದಾಡಿ ಅಧಿಕಾರಿಯಿಂದ ಹೈ ಡ್ರಾಮಾ !

ತಾಲೂಕಿನ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ (EO) ಎನ್.ವೆಂಕಟೇಶಪ್ಪ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Share this Video
  • FB
  • Linkdin
  • Whatsapp

ಕೋಲಾರ: ರಾಜ್ಯದ ವಿವಿಧೆಡೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೆಲ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಬೀದರ್‌, ಕೋಲಾರ, ಬಳ್ಳಾರಿ, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ಕೆಲಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೋಲಾರ ತಾಲೂಕಿನ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ (ಇಒ) ಎನ್‌.ವೆಂಕಟೇಶಪ್ಪ ಮನೆ ಮೇಲೆ ಸೋಮವಾರ ದಾಳಿ ನಡೆಸಿದ್ದಾರೆ. ಬಳ್ಳಾರಿಯ ರಾಘವೇಂದ್ರ ಕಾಲೋನಿಯ ಮನೆ, ಹೊಸಪೇಟೆ ಮನೆ ಮತ್ತು ಇತರೆ ಆರು ಕಡೆಗಳಲ್ಲಿ ಆದಾಯಕ್ಕೂ ಮೀರಿ ಅಕ್ರಮವಾಗಿ ಆಸ್ತಿ‌ ಸಂಪಾದನೆ ಮಾಡಿರುವ ಆರೋಪ ಕೇಳಿಬಂದಿದೆ. ದಾಳಿ ವೇಳೆ ವೆಂಕಟೇಶಪ್ಪ ನೆಲದ ಮೇಲೆ ಬಿದ್ದು ಒದ್ದಾಡಿ ಹೈ ಡ್ರಾಮಾ ಮಾಡಿದ್ಧಾರೆ.

Add Asianetnews Kannada as a Preferred SourcegooglePreferred

ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ತಿಮಿಂಗಲ: ಗಂಗಾಧರಯ್ಯನ ಇತಿಹಾಸವೇ ಬೆಚ್ಚಿ ಬೀಳಿಸುತ್ತೆ!

Related Video