ಸಚಿವರಿಗೆ ಎಲೆಕ್ಷನ್‌ ಟಾಸ್ಕ್‌ ಕೊಟ್ಟ ಸಿಎಂ: ಜವಾಬ್ದಾರಿ ಸರಿಯಾಗಿ ನಿರ್ವಹಿಸದಿದ್ದರೆ ಸಂಪುಟದಿಂದ ಕೊಕ್‌ ?

ಸಿಎಂ ಸಿದ್ದರಾಮಯ್ಯ ನಡೆಸಿದ ಬ್ರೇಕ್‌ ಫಾಸ್ಟ್‌ ಸಭೆಯಲ್ಲಿ ಸಚಿವರಿಗೆ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಖಡಕ್‌ ಸೂಚನೆ ನೀಡಲಾಗಿದೆ.
 

Share this Video
  • FB
  • Linkdin
  • Whatsapp

ಲೋಕಸಭಾ ಚುನಾವಣೆ ಗೆಲ್ಲಲು ರಾಜ್ಯ ಕಾಂಗ್ರೆಸ್‌(Congress) ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸಂಪುಟದ ಸಚಿವರಿಗೆ(Cabinet ministers) ಲೋಕಸಭೆ ಎಲೆಕ್ಷನ್‌(Loksabha election) ಜವಾಬ್ದಾರಿ ನೀಡಲಾಗಿದೆ. ಒಂದು ವೇಳೆ ಈ ಟಾಸ್ಕ್‌ನನ್ನು ಸರಿಯಾಗಿ ನಿಭಾಯಿಸದಿದ್ದರೇ, ಸಚಿವ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ. ಒಂದು ವೇಳೆ ಲೋಕಸಭೆಯಲ್ಲಿ ಗೆಲ್ಲಲಿದ್ರೆ, ಕ್ಯಾಬಿನೆಟ್‌ನಲ್ಲಿ ಮುಂದುವರಿಸಬೇಕೋ ಅಥವಾ ಬೇಡವೋ ಎಂಬುದನ್ನು ಹೈಕಮಾಂಡ್‌ ನಿರ್ಧಾರ ಮಾಡಲಿದೆಯಂತೆ. ಸಚಿವರಿಗೆ ಆರ್ಥಿಕ ಹೊಣೆಗಾರಿಕೆ ಸೇರಿ ಎಲ್ಲಾ ಜವಾಬ್ದಾರಿ ನೀಡಲಾಗಿದೆ. ಈ ಬಗ್ಗೆ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರಂತೆ. 

Add Asianetnews Kannada as a Preferred SourcegooglePreferred

ಇದನ್ನೂ ವೀಕ್ಷಿಸಿ: ಐದು ರಾಜ್ಯಗಳ ಚುನಾವಣೆಯಲ್ಲಿ ಯಾರಿಗೆ ಅಧಿಕಾರ? ಎಂಪಿ, ರಾಜಸ್ಥಾನದಲ್ಲಿ ಗೆಲ್ಲೋರು ಯಾರು ?

Related Video