
ಜಗತ್ತಿಗೆ ದಾರಿದೀಪ ವಾಲ್ಮೀಕಿ:ಸಿಎಂ ಬೊಮ್ಮಾಯಿ
ವಾಲ್ಮೀಕಿ ಪರಿವರ್ತನೆಯ ಹರಿಕಾರರಾಗಿದ್ದು, ಜಗತ್ತಿಗೆ ದಾರಿದೀಪವಾಗಿದ್ದಾರೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದು,ವಾಲ್ಮೀಕಿ ಜಯಂತಿಯ ಅಂಗವಾಗಿ ಮಾತನಾಡಿದ್ದಾರೆ.
ವಾಲ್ಮೀಕಿ ಶ್ರೇಷ್ಠ ಮಾನವತಾವಾದಿಯಾಗಿದ್ದು , ಎಲ್ಲರಿಗೂ ದಾರಿದೀಪವಾಗಿದ್ದಾರೆ ಎಂದು ಸಿ.ಎಂ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪರಿವರ್ತನೆಯ ಸಂಕೇತ ವಾಲ್ಮೀಕಿಯವರಾಗಿದ್ದು, ಪರಿವರ್ತನೆಯ ಹರಿಕಾರರಾಗಿದ್ದಾರೆ. ಹಾಗೆ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ವಿಶ್ವದ ಹತ್ತು ಶ್ರೇಷ್ಠ ಗ್ರಂಥಗಳಲ್ಲಿ ಒಂದಾಗಿದ್ದು, ಇದರಲ್ಲಿ ಜೀವನದ ಮಾರ್ಗ ಮತ್ತು ಸಾರವನ್ನು ಹೇಳಲಾಗಿದೆ. ಇನ್ನು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಾಡಿನಾದ್ಯಂತ ಅರ್ಥಪೂರ್ಣ ವಾಗಿ ಆಚರಿಸಲಾಗುತ್ತಿದ್ದು, ಅವರ ಆದರ್ಶಗಳನ್ನು ಆಡಳಿತದಲ್ಲಿ ಅಳವಡಿಸಿಕೊಳ್ಳಲಾಗುವುದು ಎಂದು ಸಿ. ಎಂ ಬಸವರಾಜ ಬೊಮ್ಮಾಯಿ ಹೇಳಿದರು.