KR ಪೇಟೆ ಉಪಸಮರ: ತಮ್ಮದೇ ತಂತ್ರ ರೂಪಿಸಿದ ಸುಮಲತಾ ಚಿತ್ತ ಎತ್ತ..?

ಕಾಂಗ್ರೆಸ್-ಜೆಡಿಎಸ್ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಉಪಚುನಾವಣೆ ಸಮೀಪಿಸುತ್ತಿದ್ದಂತೆಯೇ ಇತ್ತ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಡೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಮಂಡ್ಯದ ಕೆ.ಆರ್.ಪೇಟೆ  ಜೆಡಿಎಸ್​ ಅನರ್ಹ ಶಾಸಕ ನಾರಾಯಣಗೌಡರಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ಇದೇ ಡಿ.5ಕ್ಕೆ ಮತದಾನ ನಡೆಯಲಿದೆ. ಆದ್ರೆ, ಈ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಬೆಂಬಲ ಯಾರಿಗೆ ಎಂಬುದೇ ಈಗ ರಾಜ್ಯ ರಾಜಕಾರಣದಲ್ಲಿ ಬಿಸಿ ಬಿಸಿ ಚರ್ಚೆಯಾಗಿದೆ.

Share this Video
  • FB
  • Linkdin
  • Whatsapp

ಮಂಡ್ಯ, (ನ.2): ಕಾಂಗ್ರೆಸ್-ಜೆಡಿಎಸ್ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಉಪಚುನಾವಣೆ ಸಮೀಪಿಸುತ್ತಿದ್ದಂತೆಯೇ ಇತ್ತ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಡೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

Add Asianetnews Kannada as a Preferred SourcegooglePreferred

ಮಂಡ್ಯದ ಕೆ.ಆರ್.ಪೇಟೆ ಜೆಡಿಎಸ್​ ಅನರ್ಹ ಶಾಸಕ ನಾರಾಯಣಗೌಡರಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ಇದೇ ಡಿ.5ಕ್ಕೆ ಮತದಾನ ನಡೆಯಲಿದೆ. ಆದ್ರೆ, ಈ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಬೆಂಬಲ ಯಾರಿಗೆ ಎಂಬುದೇ ಈಗ ರಾಜ್ಯ ರಾಜಕಾರಣದಲ್ಲಿ ಬಿಸಿ ಬಿಸಿ ಚರ್ಚೆಯಾಗಿದೆ. 

ಇದರ ಮಧ್ಯೆ ಸದ್ಯಕ್ಕೆ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದು, ಅಡ್ಡ ಗೋಡೆ ಮೇಲೆ ದ್ವೀಪ ಇಟ್ಟಂತೆ ಮಾತಮಾಡಿದ್ದಾರೆ. ಹಾಗಾದ್ರೆ ಸುಮಲತಾ ಅಂಬರೀಶ್ ಯಾರಿಗೆ ಬೆಂಬಲ ಎನ್ನುವುದಕ್ಕೆ ಏನೆಲ್ಲ ಮಾತಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Related Video