ಸತ್ಯ ಧಾನ್ಯ, ಸುಳ್ಳು ತೌಡು...ಸಿದ್ದರಾಮಯ್ಯಗೆ ಸಚಿವ ಸುಧಾಕರ್ ಸತ್ಯದ ಪಾಠ!
ಕೊರೋನಾ ವಿಚಾರದಲ್ಲಿ ಭ್ರಷ್ಟಾಚಾರ ಆರೋಪ/ ತಿರುಗೇಟು ನೀಡಿದ ಸಚಿವ ಸುಧಾಕರ್/ ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂದು ಗೊತ್ತಿದೆ
ಬೆಂಗಳೂರು (ಜು. 23) ಕೊರೋನಾಕ್ಕೆ ಸಂಬಂಧಿಸಿ ವೈದ್ಯಕೀಯ ಸಾಮಗ್ರಿ ಖರೀದಿ ವಿಚಾರದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದರು. ಇದೆಲ್ಲ ಆಧಾರ ರಹಿತ ಆರೋಪ ಎಂದು ವೈದ್ಯ ಶಿಕ್ಷಣ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ.
ಭ್ರಷ್ಟಾಚಾರದ ಸುವಾಸನೆ ಬರ್ತಿದೆ ಎಂದು ಕರೆಯಬೇಕಾ? ಸಿದ್ದು ದಾಖಳೆ ಪಂಚ್
ಸರಣಿ ಟ್ವೀಟ್ ಮಾಡಿರುವ ಸುಧಾಕರ್, ಜಗತ್ತಿನಲ್ಲಿ ನಾನೇ ಬಲ್ಲವನೆಂದು. ನಾನೇ ಸತ್ಯವಂತನೆಂದುಕೊಂಡರೆ ಅಂಥವರು ಎಲ್ಲರಿಗಿಂತಲೂ ಕೀಳಾಗುತ್ತಾರೆ. ಸೇವಾ ಕಾರ್ಯದಲ್ಲಿ ಪ್ರೀತಿ ಕರುಣೆ ಇರಬೇಕೆ ಹೊರತು ಪ್ರತಿಷ್ಠೆ ಕೀರ್ತಿ ಮತ್ತು ಕಾಮನೆಗಳಲ್ಲ. ಅಸೂಯೆ ಅಧಃಪತನಕ್ಕೆ ನಾಂದಿ. ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂದು ಗೊತ್ತಿದೆ ಎಂದು ಹೇಳಿದ್ದಾರೆ