Asianet Suvarna News Asianet Suvarna News

'ಜೈಲಿನಲ್ಲಿದ್ದು ಬಂದ ಡಿಕೆಶಿಗೆ ಇನ್ನೊಬ್ಬರ ನೈತಿಕತೆ ಬಗ್ಗೆ ಮಾತನಾಡುವ ಅಧಿಕಾರವಿಲ್ಲ'

ಜೈಲಿನಲ್ಲಿದ್ದು ಬಂದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಅವರಿಗೆ ಇನ್ನೊಬ್ಬರ ನೈತಿಕತೆ ಬಗ್ಗೆ ಮಾತನಾಡುವ ಅಧಿಕಾರವಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. 

ಹುಬ್ಬಳ್ಳಿ(ಆಗಸ್ಟ್​. 23): ಜೈಲಿನಲ್ಲಿದ್ದು ಬಂದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಅವರಿಗೆ ಇನ್ನೊಬ್ಬರ ನೈತಿಕತೆ ಬಗ್ಗೆ ಮಾತನಾಡುವ ಅಧಿಕಾರವಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. 

ಡಿಕೆ ಬ್ರದರ್ಸ್‌ಗೆ ತಿರುಗೇಟು ಕೊಟ್ಟ ಬಿವೈ ವಿಜಯೇಂದ್ರ..!

ಫೋನ್ ಕದ್ದಾಲಿಕೆ ಕುರಿತು ಶಿವಕುಮಾರ್ ಮಾಡಿರುವ ಆರೋಪ ಕುರಿತು ಭಾನುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್​ ಅವರು ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ಅವರ ಮೇಲಿನ ಯಾವುದೇ ಕೇಸ್‌ಗಳು ಮುಗಿದಿಲ್ಲ‌. ಅವರದ್ದೇ ಶಾಸಕರ ಮನೆ ಮೇಲೆ ದಾಳಿ ಆಗಿದೆ. ಕಾಂಗ್ರೆಸ್‌ನ ಯಾವುದೇ ನಾಯಕರು ಘಟನೆಯನ್ನು ಖಂಡಿಸಿಲ್ಲ. ತುಷ್ಟೀಕರಣ ರಾಜಕೀಯದಿಂದ ದೇಶವನ್ನು ಹಾಳು ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

Video Top Stories