ಸಂತೋಷ್ ಆತ್ಮಹತ್ಯೆ, ಮೊದಲ ಪ್ರತಿಕ್ರಿಯೆ ನೀಡಿದ ಸಚಿವ ಈಶ್ವರಪ್ಪ
ಉಡುಪಿಯ ಲಾಡ್ಜ್ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈಶ್ವರಪ್ಪನವರಿಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಈಶ್ವರಪ್ಪ ಅವರ ರಾಝೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ. ಇನ್ನು ಈ ಕುರಿತು ಮೈಸೂರಿ(Mysore)ನಲ್ಲಿ ಮಾತನಾಡಿರುವ ಕೆ ಎಸ್ ಈಶ್ವರಪ್ಪ ಹೇಳಿದ್ದಿಷ್ಟು
ಮೈಸೂರು, (ಏ.12): ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ ಎಸ್ ಈಶ್ವರಪ್ಪ (KS Eshwarappa) ಕಾರಣ ಎಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಉಡುಪಿಯ ಲಾಡ್ಜ್ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈಶ್ವರಪ್ಪನವರಿಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಈಶ್ವರಪ್ಪ ಅವರ ರಾಜೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ.
'ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ', 40% ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ!
ಇನ್ನು ಈ ಕುರಿತು ಮೈಸೂರಿ(Mysore)ನಲ್ಲಿ ಮಾತನಾಡಿರುವ ಕೆ ಎಸ್ ಈಶ್ವರಪ್ಪ, ಆತ (Santosh Patil) ಯಾರೆಂಬುದೇ ನನಗೆ ಗೊತ್ತಿಲ್ಲ ಎಂದಿದ್ದಾರೆ. ಪ್ರಕರಣ ಕುರಿತು ಮಾತನಾಡಿರುವ ಅವರು, ಇದರಲ್ಲಿ ನನ್ನ ಪಾತ್ರ ಇಲ್ಲ. ಆತ ಯಾರೆಂಬುದೇ ನನಗೆ ಗೊತ್ತಿಲ್ಲ ಎಂದಿದ್ದಾರೆ.