
ಮುನಿರತ್ನ ಆರೋಪ ತನಿಖೆಯಾಗಲಿ: ಸಚಿವ ಸಂತೋಷ್ ಲಾಡ್ ಆಗ್ರಹ! Santosh Lad on Munirathna Allegation
ಶಿವಮೊಗ್ಗದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಶಾಸಕ ಗೋಪಾಲಕೃಷ್ಣ ಅವರ ಹುಟ್ಟುಹಬ್ಬದ ಹಿನ್ನೆಲೆ ಆಗಮಿಸಿದ್ದರು. ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಹಲ್ಲೆ ವಿಚಾರದ ಬಗ್ಗೆ ತನಗೆ ಯಾವುದೇ ಮಾಹಿತಿ ಇಲ್ಲ ಎಂದರು. ಶಾಸಕ ಮುನಿರತ್ನ ಡಿಕೆಶಿ ವಿರುದ್ಧ 2000 ಕೋಟಿ ಆರೋಪ ಮಾಡಿದ ವಿಚಾರದ ಬಗ್ಗೆ ತನಿಖೆ ನಡೆಯಬೇಕು, ಈ ಆರೋಪದಲ್ಲಿ ಎಷ್ಟು ಸತ್ಯ ಇದೆ ಎಂದು ಪರಿಶೀಲಿಸಬೇಕು ಎಂದು ಹೇಳಿದರು. ಸಿಎಂ ಸ್ಥಾನದ ಕುರಿತು ಡಿಕೆ ಶಿವಕುಮಾರ್ ಬಗ್ಗೆ ಪಕ್ಷದಲ್ಲೇ ಅಸಮಾಧಾನ ಎದ್ದಿರುವ ವಿಚಾರದ ಬಗ್ಗೆ ಮಾತನಾಡುತ್ತಾ, ಕೇಂದ್ರದಲ್ಲೂ ಕೂಡ ಅದೇ ನಡೆಯುತ್ತಿದೆ, ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಬೇಡ ನಿತಿನ್ ಗಡ್ಕರಿ ಆಗಲಿ ಎಂದು ಹೇಳಲಾಗುತ್ತಿದೆ ಎಂದು ಮಾಧ್ಯಮಗಳಿಗೆ ಪ್ರಶ್ನಿಸಿದರು. ಕಾರ್ಮಿಕ ಇಲಾಖೆಯಲ್ಲಿ ಸೌಲಭ್ಯಗಳು ಸಿಗುತ್ತಿಲ್ಲ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನದ ಸೌಲಭ್ಯವಿದೆ, ಬೇರೆ ಇಲಾಖೆಗಳಂತೆ ಸ್ಕೀಮ್ ಗಳು ನಮ್ಮಲ್ಲಿ ಇಲ್ಲ, ಡೀಪ್ ವರ್ಕರ್ ಯೋಜನೆ ಮಾಡುತ್ತಿದ್ದೇವೆ. 45 ಪಂಗಡಗಳನ್ನು ಗುರುತಿಸಿ ಕಾರ್ಮಿಕ ಕಾರ್ಡ್ ವಿತರಣೆ ಮಾಡುತ್ತಿದ್ದೇವೆ. ಪೆಟ್ರೋಲ್ ಮತ್ತು ಡೀಸೆಲ್ನಲ್ಲಿ 50 ಪೈಸೆ ಸೆಸ್ ಕಲೆಕ್ಟ್ ಮಾಡಿ ಬಜೆಟ್ನಲ್ಲಿ ಕಾರ್ಮಿಕ ಬೋರ್ಡಿಗೆ ನೀಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ ಎಂದರು.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared