'ಸಿದ್ದರಾಮಯ್ಯನವರೇ ನಿಮಗೆ ಧಮ್ ಇದ್ರೆ ಕಾಂಗ್ರೆಸ್‌ ಅಧ್ಯಕ್ಷರನ್ನು ಬದಲಾಯಿಸಿ'

ನಮಗೆ ಧೈರ್ಯ ಇರೋದ್ರಿಂದಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ' ಎಂದು ಸಿದ್ದರಾಮಯ್ಯ ಟೀಕೆಗೆ ಅಶೋಕ್ ಉತ್ತರಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 28): 'ಸಿದ್ದರಾಮಯ್ಯನವರು ಪದೇ ಪದೇ 'ಬಿಜೆಪಿಯವರಿಗೆ ಧೈರ್ಯ ಇದೆಯೇನ್ರಿ? ಧಮ್ ಇದೆಯಾ? ಅಂತ ಪದೇ ಪದೇ ಚಾಲೆಂಜ್ ಹಾಕುತ್ತಾರೆ. ಇದಕ್ಕೆ ನಾನು ಸಿದ್ದರಾಮಯ್ಯನವರಿಗೆ ಉತ್ತರ ಕೊಡಲು ಬಯಸುತ್ತೇನೆ. ನಮಗೆ ಧೈರ್ಯ ಇರೋದ್ರಿಂದಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಇನ್ನು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿ, ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವಾಗಿ ಮಾಡಿದ್ದೇವೆ. ನಂತರ ತ್ರಿವಳಿ ತಲಾಖನ್ನು ರದ್ದು ಮಾಡಿದ್ದೇವೆ. ನಮ್ಮ ಧಮ್ ಬಗ್ಗೆ ಪ್ರಶ್ನೆ ಮಾಡಬೇಡಿ. ನಿಮಗೆ ಧಮ್ ಇದ್ರೆ ಕಾಂಗ್ರೆಸ್ಸಿಗೆ ರಿಯಲ್ ಅಧ್ಯಕ್ಷರನ್ನು ಮಾಡಿದ್ರೆ ನಿಮಗೆ ಬಿಜೆಪಿ ಸೆಲ್ಯೂಟ್ ಹೊಡೆಯುತ್ತದೆ' ಎಂದು ಆರ್. ಅಶೋಕ್ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'RR ನಗರಕ್ಕೆ ಕನಕಪುರ ಬಂಡೆ, ಚಿಕ್ಕ ಬಂಡೆ ಏನ್ರಿ ಕೊಟ್ಟಿದ್ದಾರೆ? ನಾಚಿಕೆ ಅಗಲ್ವೇನ್ರಿ'?

Related Video