
ಶಾಸಕ ಪ್ರೀತಂ ಗೌಡ ಇತಿಮಿಯಲ್ಲಿ ಇರಬೇಕು : ಸೋಮಣ್ಣ ವಾರ್ನಿಂಗ್
ಒಂದು ಬಾರಿ ಶಾಸಕರಾದ ಕೂಡಲೆ ಯಾರು ದೇವರಾಗಲ್ಲ ಎಂದು ಶಾಸಕ ಪ್ರೀತಂ ಗೌಡ ವಿರುದ್ಧ ಸಚಿವ ಸೋಮಣ್ಣ ಕಿಡಿ ಕಾರಿದ್ದಾರೆ.
ಬೆಂಗಳೂರು (ಆ.10): ಒಂದು ಬಾರಿ ಶಾಸಕರಾದ ಕೂಡಲೆ ಯಾರು ದೇವರಾಗಲ್ಲ ಎಂದು ಶಾಸಕ ಪ್ರೀತಂ ಗೌಡ ವಿರುದ್ಧ ಸಚಿವ ಸೋಮಣ್ಣ ಕಿಡಿ ಕಾರಿದ್ದಾರೆ.
Add Asianetnews Kannada as a Preferred Source

'ಸಿಎಂ ಆದ ಕೂಡಲೆ ದೇವೇಗೌಡರ ಭೇಟಿ ಅಗತ್ಯವೇನಿತ್ತು, ಹೊಂದಾಣಿಕೆ ರಾಜಕೀಯ ಬೇಡ'
ಶಾಸಕ ಪ್ರೀತಂ ಇತಿ ಮಿತಿಯಲ್ಲಿ ಮಾತನಾಡಬೇಕು ಎಂದರು. ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿಸಿದ್ದ ಪ್ರೀತಂಗೌಡ ವಿರುದ್ಧ ಸೋಮಣ್ಣ ವಾಗ್ದಾಳಿ ನಡೆಸಿದರು. ಗೌಡರ ಕುಟುಂಬ 50 ವರ್ಷದಿಂದ ರಾಜಕೀಯದಲ್ಲಿದೆ. ಇಂತಹವರ ಮಾತಿಗೆಲ್ಲಾ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದರು.