Asianet Suvarna News Asianet Suvarna News

Party Rounds: ಮಗನಿಗೆ ಟಿಕೆಟಿಲ್ಲ ಅಂದಿದಕ್ಕೆ ಕೋಪ, ಬಿಜೆಪಿ ತೊರೆಯುತ್ತಾರಾ ಸೋಮಣ್ಣ?

ವಸತಿ ಸಚಿವ ವಿ.ಸೋಮಣ್ಣ ಬಿಜೆಪಿ ತೊರೆಯುತ್ತಾರೆಂಬ ವದಂತಿ ಹಬ್ಬಿದ ಬೆನ್ನಲ್ಲೇ ಬಿಜೆಪಿಗೆ ತಲೆ ನೋವು ಶುರುವಾಗಿದೆ. ಕಾಂಗ್ರೆಸ್ ಸೇರುತ್ತಾರೆ ಎಂದು ಗುಲ್ಲೆದ್ದಿದೆ.

First Published Mar 13, 2023, 7:09 PM IST | Last Updated Mar 13, 2023, 7:09 PM IST

ಬೆಂಗಳೂರು (ಮಾ.13): ವಸತಿ ಸಚಿವ ವಿ.ಸೋಮಣ್ಣ ಬಿಜೆಪಿ ತೊರೆಯುತ್ತಾರೆಂಬ ವದಂತಿ ಹಬ್ಬಿದ ಬೆನ್ನಲ್ಲೇ ಬಜೆಪಿಗೆ ತಲೆ ನೋವು ತಂದಿದೆ. ಬೆಂಗಳೂರು ನಗರದ 4-5 ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿರುವ ಲಿಂಗಾಯತ ಸಮುದಾಯದ ಮುಖಂಡ ವಿ.ಸೋಮಣ್ಣ ಪುತ್ರ ಅರುಣ್‌ ಸೋಮಣ್ಣಗೆ ಟಿಕೆಟ್ ನೀಡಲು ಬಿಜೆಪಿ ನಿರಾಕರಿಸಿತಾ? ಈ  ವಿಚಾರವಾಗಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆಯೇ ಎಂದು ಪ್ರಶ್ನೆ ಎದ್ದಿದೆ. ಸೋಮಣ್ಣ ಏನು ಹೇಳಿದ್ದಾರೆ ಎಂಬ ಸಂಪೂರ್ಣ ವಿವರ ಇಲ್ಲಿದೆ.