Asianet Suvarna News Asianet Suvarna News

ಮುನಿರತ್ನ ಏನೇನು ಮಾತನಾಡುತ್ತಾರೋ ಮಾತನಾಡಲಿ: ಡಿ.ಕೆ.ಸುರೇಶ

ನಾನು ಸಂಜೆ 4 ಗಂಟೆಗೆ ಮಾತನಾಡುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ| ಮುನಿರತ್ನ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ನಾಲ್ಕು ಗಂಟೆ ಸುದ್ದಿಗೋಷ್ಠಿ ಕರೆದಿದ್ದೇನೆ, ಅಲ್ಲಿಯೇ ಎಲ್ಲ ಆರೋಪಗಳಿಗೆ ಉತ್ತರ ನೀಡಲಿದ್ದೇನೆ|  

ಬೆಂಗಳೂರು(ನ.01): ಮುನಿರತ್ನ  ಏನೇನು ಮಾತನಾಡುತ್ತಾರೋ ಮಾತನಾಡಲಿ, ನಾನು ಸಂಜೆ 4 ಗಂಟೆಗೆ ಮಾತನಾಡುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ ಅವರು ಹೇಳಿದ್ದಾರೆ. ಆರ್‌.ಅರ್‌ ನಗರದಲ್ಲಿ ಕಾಂಗ್ರೆಸ್‌ ಹಣ ಹಂಚಿಕೆ ಮಾಡುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಆರೋಪಿಸಿದ್ದಾರೆ.  

ಕಾಂಗ್ರೆಸ್ ವಿರುದ್ಧ ಅಭ್ಯರ್ಥಿ ಮುನಿರತ್ನ ಗಂಭೀರ ಆರೋಪ

ಈ ಸಂಬಂಧ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ಡಿ.ಕೆ.ಸುರೇಶ, ಮುನಿರತ್ನ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ನಾಲ್ಕು ಗಂಟೆ ಸುದ್ದಿಗೋಷ್ಠಿ ಕರೆದಿದ್ದೇನೆ, ಅಲ್ಲಿಯೇ ಎಲ್ಲ ಆರೋಪಗಳಿಗೆ ಉತ್ತರ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ಕ್ಷೇತ್ರದಲ್ಲಿ ಅಶಾಂತಿ ಮೂಡಿಸಲು ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದಿದ್ದಾರೆ.