Asianet Suvarna News Asianet Suvarna News

'ಮೈಸೂರು ಗ್ಯಾಂಗ್ ರೇಪ್ ಕೇಸ್ ಹೇಳಿಕೆ: ಆರಗ ಜ್ಞಾನೇಂದ್ರಗೆ ಪ್ರವಾಸೋದ್ಯಮ ಇಲಾಖೆಗೆ ಕೊಡ್ಬೇಕಿತ್ತು'

ಮೈಸೂರು ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಪ್ರತಿಕ್ರಿಯಿಸಿದ್ದು, ಆರಗ ಜ್ಞಾನೇಂದ್ರ ಅವರು ಪ್ರವಾಸೋದ್ಯಮ ಇಲಾಖೆಗೆ ಫಿಟ್ ಆಗಿದ್ರು ಎಂದು ಲೇವಡಿ ಮಾಡಿದ್ದಾರೆ.

ಚಿಕ್ಕಮಗಳೂರು, (ಆ.26): ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ನವರು ರಾಜಕೀಯ ಲಾಭ ಗಳಿಸಲು ಯತ್ನಿಸುತ್ತಿದ್ದಾರೆ. ಅತ್ಯಾಚಾರ ಆಗಿದ್ದು ಅಲ್ಲಿ, ಆದರೆ ಕಾಂಗ್ರೆಸ್‌ನವರು ನನ್ನನ್ನು ರೇಪ್ ಮಾಡ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ರೇಪ್ ಸಂತ್ರಸ್ತೆ ಅಷ್ಟೊತ್ತಿಗೆ ಆ ನಿರ್ಜನ ಪ್ರದೇಶಕ್ಕೆ ಹೋಗ್ಬಾರದಿತ್ತು: ಗೃಹ ಸಚಿವ ವಿವಾದಾತ್ಮಕ ಹೇಳಿಕೆ

ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಪ್ರತಿಕ್ರಿಯಿಸಿದ್ದು, ಆರಗ ಜ್ಞಾನೇಂದ್ರ ಅವರು ಪ್ರವಾಸೋದ್ಯಮ ಇಲಾಖೆಗೆ ಫಿಟ್ ಆಗಿದ್ರು ಎಂದು ಲೇವಡಿ ಮಾಡಿದ್ದಾರೆ.